<p>ಕಲಬುರಗಿ: ‘ಸಂವಿಧಾನದ 371 (ಜೆ) ಜಾರಿಯ ದಶಮಾನೋತ್ಸವ ಸಂದರ್ಭದಲ್ಲಿ 371 (ಜೆ) ಕಲಂ ಮತ್ತು ಕಲ್ಯಾಣದ ಅಭಿವೃದ್ಧಿ ಕುರಿತು ಕಲ್ಯಾಣ ಕರ್ನಾಟಕ ಪ್ರದೇಶದಾದ್ಯಂತ ಜಾಗೃತಿ ಅಭಿಯಾನ ನಡೆಸಬೇಕು’ ಎಂದು ಖಾಜಾ ಬಂದಾನವಾಜ್ ದರ್ಗಾದ ಮುಖ್ಯಸ್ಥ ಸೈಯದ್ ಮುಹಮ್ಮದ್ ಅಲಿ ಅಲ್ ಹುಸೇನಿ ಹೇಳಿದರು.</p>.<p>ಕೆಬಿಎನ್ ದರ್ಗಾದಲ್ಲಿ ಭಾನುವಾರ ಭೇಟಿಯಾದ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಏಳು ಜಿಲ್ಲೆಗಳಲ್ಲಿ ಹೋರಾಟ ಸಮಿತಿ ವತಿಯಿಂದ ಜಾಗೃತಿ ಅಭಿಯಾನ ಹಮ್ಮಿಕೊಳ್ಳಬೇಕು. ಇದಕ್ಕೆ ಕೆಬಿಎನ್ ಸಂಸ್ಥೆ ಹಾಗೂ ವಿಶ್ವವಿದ್ಯಾಲಯವು ಸಂಪೂರ್ಣ ಸಹಕಾರ ನೀಡಲಿದೆ’ ಎಂದರು.</p>.<p>‘ಕೆಬಿಎನ್ ಸಂಸ್ಥೆ ವತಿಯಿಂದ ಶಿಕ್ಷಣ ಸಂಸ್ಥೆಗಳ, ಕಾಲೇಜುಗಳ ಪ್ರಮುಖರ ಹಾಗೂ ಇತರೆ ಕ್ಷೇತ್ರಗಳ ಗಣ್ಯರ ಸಭೆಯನ್ನು ಶೀಘ್ರವೇ ಕರೆಯಲಾಗುವುದು’ ಎಂದು ಹೇಳಿದರು.</p>.<p>ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ, ಸಮಿತಿಯ ಪ್ರಮುಖರಾದ ಬಸವರಾಜ ಕುಮನೂರ, ಮಾಜಿದ್ ದಾಗಿ, ರೌಫ್ ಖಾದ್ರಿ, ಅಸ್ಲಂ ಚೌಂಗೆ, ಮಂಜೂರಿ ಡೆಕ್ಕನ್ ಸೇರಿ ಹಲವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ‘ಸಂವಿಧಾನದ 371 (ಜೆ) ಜಾರಿಯ ದಶಮಾನೋತ್ಸವ ಸಂದರ್ಭದಲ್ಲಿ 371 (ಜೆ) ಕಲಂ ಮತ್ತು ಕಲ್ಯಾಣದ ಅಭಿವೃದ್ಧಿ ಕುರಿತು ಕಲ್ಯಾಣ ಕರ್ನಾಟಕ ಪ್ರದೇಶದಾದ್ಯಂತ ಜಾಗೃತಿ ಅಭಿಯಾನ ನಡೆಸಬೇಕು’ ಎಂದು ಖಾಜಾ ಬಂದಾನವಾಜ್ ದರ್ಗಾದ ಮುಖ್ಯಸ್ಥ ಸೈಯದ್ ಮುಹಮ್ಮದ್ ಅಲಿ ಅಲ್ ಹುಸೇನಿ ಹೇಳಿದರು.</p>.<p>ಕೆಬಿಎನ್ ದರ್ಗಾದಲ್ಲಿ ಭಾನುವಾರ ಭೇಟಿಯಾದ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಏಳು ಜಿಲ್ಲೆಗಳಲ್ಲಿ ಹೋರಾಟ ಸಮಿತಿ ವತಿಯಿಂದ ಜಾಗೃತಿ ಅಭಿಯಾನ ಹಮ್ಮಿಕೊಳ್ಳಬೇಕು. ಇದಕ್ಕೆ ಕೆಬಿಎನ್ ಸಂಸ್ಥೆ ಹಾಗೂ ವಿಶ್ವವಿದ್ಯಾಲಯವು ಸಂಪೂರ್ಣ ಸಹಕಾರ ನೀಡಲಿದೆ’ ಎಂದರು.</p>.<p>‘ಕೆಬಿಎನ್ ಸಂಸ್ಥೆ ವತಿಯಿಂದ ಶಿಕ್ಷಣ ಸಂಸ್ಥೆಗಳ, ಕಾಲೇಜುಗಳ ಪ್ರಮುಖರ ಹಾಗೂ ಇತರೆ ಕ್ಷೇತ್ರಗಳ ಗಣ್ಯರ ಸಭೆಯನ್ನು ಶೀಘ್ರವೇ ಕರೆಯಲಾಗುವುದು’ ಎಂದು ಹೇಳಿದರು.</p>.<p>ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ, ಸಮಿತಿಯ ಪ್ರಮುಖರಾದ ಬಸವರಾಜ ಕುಮನೂರ, ಮಾಜಿದ್ ದಾಗಿ, ರೌಫ್ ಖಾದ್ರಿ, ಅಸ್ಲಂ ಚೌಂಗೆ, ಮಂಜೂರಿ ಡೆಕ್ಕನ್ ಸೇರಿ ಹಲವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>