ಶನಿವಾರ ಜಿಲ್ಲಾ ನ್ಯಾಯಾಲಯವೂ ಸೇರಿದಂತೆ ಎಲ್ಲ ತಾಲ್ಲೂಕು ನ್ಯಾಯಾಲಯಗಳಲ್ಲಿ ಒಂದರಿಂದ ಮೂರು ಪೀಠಗಳಲ್ಲಿ ಅದಾಲತ್ಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆ ನಡೆಯಲಿದೆ. ಹತ್ತಾರು ವರ್ಷ ಪ್ರಕರಣಗಳನ್ನು ಮುಂದುವರಿಸಿಕೊಂಡು ಹೋಗುವುದರಿಂದ ಕುಟುಂಬದ ನೆಮ್ಮದಿ, ಸೌಹಾರ್ದ ನಾಶವಾಗಲಿದೆ. ಆದ್ದರಿಂದ ನ್ಯಾಯಾಲಯ ನೀಡುವ ತೀರ್ಪಿನಂತೆಯೇ ಅದಾಲತ್ನಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿದ ಬಳಿಕ ಡಿಕ್ರಿ ಹೊರಡಿಸಲಾಗುವುದು. ಇನ್ನೊಂದು ಮಹತ್ವದ ಅಂಶವೆಂದರೆ, ಇಲ್ಲಿ ನೀಡಲಾದ ಆದೇಶಕ್ಕೆ ಮೇಲ್ಮನವಿ ಸಲ್ಲಿಸಲು ಅವಕಾಶವಿಲ್ಲ. ಹೀಗಾಗಿ, ಪ್ರಕರಣ ಮುಂದಕ್ಕೆ ಹೋಗುವ ಆತಂಕ ಇರುವುದಿಲ್ಲ ಎಂದು ಹೇಳಿದರು.