ಮೋಟಾರು ವಾಹನ ವಿಮೆ ಪ್ರಕರಣ ಹಾಗೂ ಇತರೆ ಸಿವಿಲ್ ವ್ಯಾಜ್ಯಗಳ ಪ್ರಕರಣಗಳನ್ನು ಪೀಠದ ಮುಂದೆ ಬಂದವು. ಕಲಬುರ್ಗಿ ಹೈಕೋರ್ಟ್ ಕಾನೂನು ಸೇವಾ ಸಮಿತಿಯಿಂದ ಐದು ಪೀಠಗಳನ್ನು ರಚಿಸಿದ್ದು, ಈ ಪೀಠಗಳಲ್ಲಿ ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಯಿತು. ನ್ಯಾಯಮೂರ್ತಿಗಳಾದ ಎಸ್.ಸುನೀಲದತ್ತ ಯಾದವ್, ಇ.ಎಸ್. ಇಂದಿರೇಶ್, ಎಂ.ಜಿ. ಉಮಾ, ಹಂಚಾಟೆ ಸಂಜೀವಕುಮಾರ ಹಾಗೂ ಪಿ.ಎನ್.ದೇಸಾಯಿ ಅವರ ನೇತೃತ್ವದ ಐದು ಜನರ ಪೀಠವು ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿದೆ ಎಂದು ತಿಳಿಸಲಾಗಿದೆ.