<p>ಕಲಬುರಗಿ: ‘ಜಿಲ್ಲೆಯ ಹೊನ್ನಕಿರಣಗಿ ಮತ್ತು ನದಿಸಿನ್ನೂರು ಗ್ರಾಮದ ವಿವಿಧ ಸರ್ವೆ ನಂಬರ್ಗಳಲ್ಲಿ ಒಟ್ಟು ಒಂದು ಸಾವಿರ ಎಕರೆ ಪ್ರದೇಶದಲ್ಲಿ ಪಿಎಂ ಮಿತ್ರ ಜವಳಿ ಪಾರ್ಕ್ ನಿರ್ಮಾಣ ಮಾಡಲಾಗುತ್ತಿದೆ’ ಎಂದು ಜವಳಿ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.</p>.<p>ಶುಕ್ರವಾರ ಪ್ರಶ್ನೋತ್ತರ ವೇಳೆಯಲ್ಲಿ ಕೆಕೆಆರ್ಡಿಬಿ ಅಧ್ಯಕ್ಷರೂ ಆಗಿರುವ ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಈ ಯೋಜನೆಯನ್ನು ಜಾಗತಿಕ ಟೆಂಡರ್ ಮೂಲಕ ಅಭಿವೃದ್ಧಿಪಡಿಸಲಾಗುತ್ತಿದೆ. ರಾಜ್ಯ ಸರ್ಕಾರ ಜವಳಿ ಪಾರ್ಕ್ನ ಗೇಟ್ ವರೆಗೆ ₹ 393.77 ಕೋಟಿ ವೆಚ್ಚದಲ್ಲಿ ನೀರು, ವಿದ್ಯುತ್ ಪೂರೈಕೆ ಮತ್ತು ರಸ್ತೆ ಅಭಿವೃದ್ಧಿ ಮಾಡಲು ಮಂಜೂರಾತಿ ನೀಡಿ ಕಾಮಗಾರಿ ಪ್ರಾರಂಭಿಸಲು ಕ್ರಮಕೈಗೊಂಡಿದೆ’ ಎಂದಿದ್ದಾರೆ.</p>.<p>‘ಸಚಿವ ಸಂಪುಟದ ಅನುಮೋದನೆಯಂತೆ ಮೂಲಸೌಕರ್ಯಕ್ಕೆ ವೆಚ್ಚ ಮಾಡುವ ಒಟ್ಟು ಹಣದಲ್ಲಿ ₹ 150 ಕೋಟಿ ಕೆಕೆಆರ್ಡಿಬಿ ಭರಿಸುತ್ತಿದೆ. 2024–25ನೇ ಸಾಲಿನಲ್ಲಿ ₹ 45.81 ಕೋಟಿಗಳನ್ನು ಕೆಕೆಆರ್ಡಿಬಿ ಬಿಡುಗಡೆ ಮಾಡಿದೆ’ ಎಂದು ಸಚಿವರು ತಿಳಿಸಿದ್ದಾರೆ.</p>.<p>‘ಪಿಎಂ ಮಿತ್ರ ಪಾರ್ಕ್ ಒಳಗೆ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಸಾರ್ವಜನಿಕ–ಖಾಸಗಿ ಸಹಭಾಗಿತ್ವ ಮೌಲ್ಯಮಾಪನ ಸಮಿತಿ (ಪಿಪಿಪಿಎಸಿ) ಅನುಮೋದನೆಗೆ ಮಂಡಿಸಲಾಗಿದೆ. ಅನುಮತಿ ಲಭಿಸಿದ ನಂತರ ಜಾಗತಿಕ ಟೆಂಡರ್ ಮೂಲಕ ಮಾಸ್ಟರ್ ಡೆವೆಲಪರ್ ಆಯ್ಕೆ ಮಾಡಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು’ ಎಂದು ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರಗಿ: ‘ಜಿಲ್ಲೆಯ ಹೊನ್ನಕಿರಣಗಿ ಮತ್ತು ನದಿಸಿನ್ನೂರು ಗ್ರಾಮದ ವಿವಿಧ ಸರ್ವೆ ನಂಬರ್ಗಳಲ್ಲಿ ಒಟ್ಟು ಒಂದು ಸಾವಿರ ಎಕರೆ ಪ್ರದೇಶದಲ್ಲಿ ಪಿಎಂ ಮಿತ್ರ ಜವಳಿ ಪಾರ್ಕ್ ನಿರ್ಮಾಣ ಮಾಡಲಾಗುತ್ತಿದೆ’ ಎಂದು ಜವಳಿ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.</p>.<p>ಶುಕ್ರವಾರ ಪ್ರಶ್ನೋತ್ತರ ವೇಳೆಯಲ್ಲಿ ಕೆಕೆಆರ್ಡಿಬಿ ಅಧ್ಯಕ್ಷರೂ ಆಗಿರುವ ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಈ ಯೋಜನೆಯನ್ನು ಜಾಗತಿಕ ಟೆಂಡರ್ ಮೂಲಕ ಅಭಿವೃದ್ಧಿಪಡಿಸಲಾಗುತ್ತಿದೆ. ರಾಜ್ಯ ಸರ್ಕಾರ ಜವಳಿ ಪಾರ್ಕ್ನ ಗೇಟ್ ವರೆಗೆ ₹ 393.77 ಕೋಟಿ ವೆಚ್ಚದಲ್ಲಿ ನೀರು, ವಿದ್ಯುತ್ ಪೂರೈಕೆ ಮತ್ತು ರಸ್ತೆ ಅಭಿವೃದ್ಧಿ ಮಾಡಲು ಮಂಜೂರಾತಿ ನೀಡಿ ಕಾಮಗಾರಿ ಪ್ರಾರಂಭಿಸಲು ಕ್ರಮಕೈಗೊಂಡಿದೆ’ ಎಂದಿದ್ದಾರೆ.</p>.<p>‘ಸಚಿವ ಸಂಪುಟದ ಅನುಮೋದನೆಯಂತೆ ಮೂಲಸೌಕರ್ಯಕ್ಕೆ ವೆಚ್ಚ ಮಾಡುವ ಒಟ್ಟು ಹಣದಲ್ಲಿ ₹ 150 ಕೋಟಿ ಕೆಕೆಆರ್ಡಿಬಿ ಭರಿಸುತ್ತಿದೆ. 2024–25ನೇ ಸಾಲಿನಲ್ಲಿ ₹ 45.81 ಕೋಟಿಗಳನ್ನು ಕೆಕೆಆರ್ಡಿಬಿ ಬಿಡುಗಡೆ ಮಾಡಿದೆ’ ಎಂದು ಸಚಿವರು ತಿಳಿಸಿದ್ದಾರೆ.</p>.<p>‘ಪಿಎಂ ಮಿತ್ರ ಪಾರ್ಕ್ ಒಳಗೆ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಸಾರ್ವಜನಿಕ–ಖಾಸಗಿ ಸಹಭಾಗಿತ್ವ ಮೌಲ್ಯಮಾಪನ ಸಮಿತಿ (ಪಿಪಿಪಿಎಸಿ) ಅನುಮೋದನೆಗೆ ಮಂಡಿಸಲಾಗಿದೆ. ಅನುಮತಿ ಲಭಿಸಿದ ನಂತರ ಜಾಗತಿಕ ಟೆಂಡರ್ ಮೂಲಕ ಮಾಸ್ಟರ್ ಡೆವೆಲಪರ್ ಆಯ್ಕೆ ಮಾಡಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು’ ಎಂದು ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>