ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಗೀತ ಶಿಕ್ಷಕರ ನೇಮಕ ಪ್ರಕ್ರಿಯೆಗೆ ಒತ್ತಾಯ

Last Updated 19 ಸೆಪ್ಟೆಂಬರ್ 2020, 3:28 IST
ಅಕ್ಷರ ಗಾತ್ರ

ಕಲಬುರ್ಗಿ: ಹತ್ತು ವರ್ಷಗಳಿಂದ ಸಂಗೀತ ಶಿಕ್ಷಕರ ನೇಮಕಾತಿ ನಡೆದಿಲ್ಲ. ಇದರಿಂದಾಗಿ ಸಂಗೀತ ಕಲಿತವರು ನಿರುದ್ಯೋಗಿಗಳಾಗಿದ್ದು, ಮನೆ ನಡೆಸುವುದು ಕಷ್ಟವಾಗಿದೆ. ಆದ್ದರಿಂದ ಕೂಡಲೇ ನೇಮಕ ಪ್ರಕ್ರಿಯೆ ನಡೆಸಬೇಕು ಎಂದು ಒತ್ತಾಯಿಸಿ ಕಲ್ಯಾಣ ಕರ್ನಾಟಕ ಸಂಗೀತ ಶಿಕ್ಷಕರ ನೇಮಕಾತಿ ಸಮಿತಿ ಸದಸ್ಯರು ಇತ್ತೀಚೆಗೆ ನಗರಕ್ಕೆ ಭೇಟಿ ನೀಡಿದ್ದ ಕೃಷಿ ಸಚಿವ ಬಿ.ಸಿ. ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.

ಸಮಿತಿ ಸಂಸ್ಥಾಪಕ ಬಂಡಯ್ಯ ಸ್ವಾಮಿ ಸುಂಟನೂರ, ಅಣ್ಣಾರಾವ ಮತ್ತಿಮುಡ, ಬಾಬುರಾವ್ ಕೂಬಾಳ, ಹಿರಿಯ ಕಲಾವಿದ ಸಿದ್ದಣ್ಣ ದೇಸಾಯಿಕಲ್ಲೂರ, ಶಿವಕುಮಾರ್ ಜಾಲಹಳ್ಳಿ, ಜಗದೀಶ್ ದೇಸಾಯಿಕಲ್ಲೂರ, ರೇವಣ್ಣಯ್ಯ ಸುಂಟನೂರ, ವೀರಭದ್ರಯ್ಯ ಸ್ಥಾವರಮಠ ಸಚಿವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT