<p><strong>ಕಲಬುರಗಿ</strong>: ‘ವ್ಯಕ್ತಿಯ ಮನಸ್ಸು ಎಲ್ಲದಕ್ಕೂ ಕಾರಣ. ಮಾನಸಿಕ ಅಸ್ವಸ್ಥತೆಯ ಕಾರಣಗಳನ್ನು ಕಂಡುಹಿಡಿದು ಅದಕ್ಕೆ ಪರಿಹಾರ ಕಂಡುಕೊಳ್ಳಬೇಕು. ಕೆಲಸದ ವಾತಾವರಣ ಚೆನ್ನಾಗಿಟ್ಟುಕೊಂಡರೆ ಮಾನಸಿಕ ಆರೋಗ್ಯ ಚೆನ್ನಾಗಿರುತ್ತದೆ’ ಎಂದು ಮನೋವಿಜ್ಞಾನಿ ಡಾ.ದಿಲೀಪ್ ಕುಮಾರ್ ಹೇಳಿದರು.</p>.<p>ನಗರದ ಸರ್ವಜ್ಞ ಮತ್ತು ಜಸ್ಟಿಸ್ ಶಿವರಾಜ ಪಾಟೀಲ ಸ್ವತಂತ್ರ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಪ್ರತಿಭೆ, ಕೌಶಲ, ಶಕ್ತಿ, ಸಾಮರ್ಥ್ಯ ಇರುತ್ತದೆ. ಅದನ್ನು ಸರಿಯಾದ ಕೆಲಸಕ್ಕೆ ಬಳಸಿಕೊಂಡಾಗ ಪ್ರತಿಭೆ ಹೊರಬರುತ್ತದೆ. ನನ್ನಿಂದ ಸಾಧ್ಯವಿಲ್ಲ ಎಂಬ ಕೀಳರಿಮೆ ಬಿಟ್ಟು, ಗುಣ–ಅವಗುಣವನ್ನು ಅರಿತು ಕಷ್ಟದ ವಿಷಯಗಳನ್ನು ಇಷ್ಟಪಟ್ಟು ನಿರಂತರವಾಗಿ ಓದಬೇಕು’ ಎಂದರು.</p>.<p>ಸಂಸ್ಥೆಯ ಸಂಸ್ಥಾಪಕ ಪ್ರೊ. ಚನ್ನಾರಡ್ಡಿ ಪಾಟೀಲ ಮಾತನಾಡಿ, ‘ಮನಸ್ಸಿದ್ದಲ್ಲಿ ಮಾರ್ಗವಿರುತ್ತದೆ. ಮಕ್ಕಳು ತಮ್ಮ ಮನಸ್ಸನ್ನು ಸ್ವಸ್ಥವಾಗಿರಿಕೊಂಡು ಶ್ರದ್ಧೆ, ಆಸಕ್ತಿ, ನಿರಂತರ ಪ್ರಯತ್ನದಿಂದ ಓದಿ ಸಾಧನೆ ಮಾಡಬೇಕು’ ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ‘ವ್ಯಕ್ತಿಯ ಮನಸ್ಸು ಎಲ್ಲದಕ್ಕೂ ಕಾರಣ. ಮಾನಸಿಕ ಅಸ್ವಸ್ಥತೆಯ ಕಾರಣಗಳನ್ನು ಕಂಡುಹಿಡಿದು ಅದಕ್ಕೆ ಪರಿಹಾರ ಕಂಡುಕೊಳ್ಳಬೇಕು. ಕೆಲಸದ ವಾತಾವರಣ ಚೆನ್ನಾಗಿಟ್ಟುಕೊಂಡರೆ ಮಾನಸಿಕ ಆರೋಗ್ಯ ಚೆನ್ನಾಗಿರುತ್ತದೆ’ ಎಂದು ಮನೋವಿಜ್ಞಾನಿ ಡಾ.ದಿಲೀಪ್ ಕುಮಾರ್ ಹೇಳಿದರು.</p>.<p>ನಗರದ ಸರ್ವಜ್ಞ ಮತ್ತು ಜಸ್ಟಿಸ್ ಶಿವರಾಜ ಪಾಟೀಲ ಸ್ವತಂತ್ರ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಪ್ರತಿಭೆ, ಕೌಶಲ, ಶಕ್ತಿ, ಸಾಮರ್ಥ್ಯ ಇರುತ್ತದೆ. ಅದನ್ನು ಸರಿಯಾದ ಕೆಲಸಕ್ಕೆ ಬಳಸಿಕೊಂಡಾಗ ಪ್ರತಿಭೆ ಹೊರಬರುತ್ತದೆ. ನನ್ನಿಂದ ಸಾಧ್ಯವಿಲ್ಲ ಎಂಬ ಕೀಳರಿಮೆ ಬಿಟ್ಟು, ಗುಣ–ಅವಗುಣವನ್ನು ಅರಿತು ಕಷ್ಟದ ವಿಷಯಗಳನ್ನು ಇಷ್ಟಪಟ್ಟು ನಿರಂತರವಾಗಿ ಓದಬೇಕು’ ಎಂದರು.</p>.<p>ಸಂಸ್ಥೆಯ ಸಂಸ್ಥಾಪಕ ಪ್ರೊ. ಚನ್ನಾರಡ್ಡಿ ಪಾಟೀಲ ಮಾತನಾಡಿ, ‘ಮನಸ್ಸಿದ್ದಲ್ಲಿ ಮಾರ್ಗವಿರುತ್ತದೆ. ಮಕ್ಕಳು ತಮ್ಮ ಮನಸ್ಸನ್ನು ಸ್ವಸ್ಥವಾಗಿರಿಕೊಂಡು ಶ್ರದ್ಧೆ, ಆಸಕ್ತಿ, ನಿರಂತರ ಪ್ರಯತ್ನದಿಂದ ಓದಿ ಸಾಧನೆ ಮಾಡಬೇಕು’ ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>