<p><strong>ಕಲಬುರ್ಗಿ</strong>: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಉದ್ಯಾನಗಳಲ್ಲಿ ಸುಮಾರು 5 ಸಾವಿರ ಸಸಿಗಳನ್ನು ನೆಡುವಂತೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ ಅವರಿಗೆ ಸೂಚನೆ ನೀಡಿದರು.</p>.<p>ಬುಧವಾರ ಬೆಳಿಗ್ಗೆ ನಗರದ ಶರಣಬಸವೇಶ್ವರ ದೇವಸ್ಥಾನ, ವಿದ್ಯಾನಗರ, ಎಸ್ ವಿಪಿ ಸರ್ಕಲ್, ಜಗತ್ ಸರ್ಕಲ್, ಸ್ವಸ್ತಿಕ್ ನಗರದಲ್ಲಿ ಸಂಚಾರ ನಡೆಸಿದ ಅವರು ಸ್ವಚ್ಛತಾ ಕಾರ್ಯವನ್ನು ವೀಕ್ಷಿಸಿದರು.</p>.<p>ನಗರವನ್ನು ಸ್ವಚ್ಛವಾಗಿಡಬೇಕು. ಉದ್ಯಾನವನಗಳನ್ನು ಸೂಕ್ತವಾಗಿ ನಿರ್ವಹಣೆ ಮಾಡಬೇಕು ಎಂದು ಸೂಚಿಸಿದರು.</p>.<p>ಇದೇ ಸಂದರ್ಭದಲ್ಲಿ ಪೌರಕಾರ್ಮಿಕರ ಯೋಗಕ್ಷೇಮವನ್ನು ವಿಚಾರಿಸಿದರು.</p>.<p>ಸಚಿವರು ಬರುತ್ತಿರುವುದರಿಂದ ಪಾಲಿಕೆ ಪೌರಕಾರ್ಮಿಕರಿಗೆ ಹೊಸ ಗಮ್ ಬೂಟ್, ಕೈಗವಸು, ಜಾಕೆಟ್, ಮಾಸ್ಕ್ ಗಳನ್ನು ಒದಗಿಸಿತ್ತು.</p>.<p>ನಂತರ ಜೇವರ್ಗಿ ರಸ್ತೆಯಲ್ಲಿರುವ ನಂದಿಕೂರ ಗ್ರಾಮದಲ್ಲಿರುವ ಕೊಳಚೆ ನೀರು ಶುದ್ಧೀಕರಣ ಘಟಕವನ್ನು ವೀಕ್ಷಿಸಿದರು.</p>.<p>ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಪಾಲಿಕೆಯ ಅಧಿಕಾರಿಗಳು ಈ ಸಂದರ್ಭದಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ</strong>: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಉದ್ಯಾನಗಳಲ್ಲಿ ಸುಮಾರು 5 ಸಾವಿರ ಸಸಿಗಳನ್ನು ನೆಡುವಂತೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ ಅವರಿಗೆ ಸೂಚನೆ ನೀಡಿದರು.</p>.<p>ಬುಧವಾರ ಬೆಳಿಗ್ಗೆ ನಗರದ ಶರಣಬಸವೇಶ್ವರ ದೇವಸ್ಥಾನ, ವಿದ್ಯಾನಗರ, ಎಸ್ ವಿಪಿ ಸರ್ಕಲ್, ಜಗತ್ ಸರ್ಕಲ್, ಸ್ವಸ್ತಿಕ್ ನಗರದಲ್ಲಿ ಸಂಚಾರ ನಡೆಸಿದ ಅವರು ಸ್ವಚ್ಛತಾ ಕಾರ್ಯವನ್ನು ವೀಕ್ಷಿಸಿದರು.</p>.<p>ನಗರವನ್ನು ಸ್ವಚ್ಛವಾಗಿಡಬೇಕು. ಉದ್ಯಾನವನಗಳನ್ನು ಸೂಕ್ತವಾಗಿ ನಿರ್ವಹಣೆ ಮಾಡಬೇಕು ಎಂದು ಸೂಚಿಸಿದರು.</p>.<p>ಇದೇ ಸಂದರ್ಭದಲ್ಲಿ ಪೌರಕಾರ್ಮಿಕರ ಯೋಗಕ್ಷೇಮವನ್ನು ವಿಚಾರಿಸಿದರು.</p>.<p>ಸಚಿವರು ಬರುತ್ತಿರುವುದರಿಂದ ಪಾಲಿಕೆ ಪೌರಕಾರ್ಮಿಕರಿಗೆ ಹೊಸ ಗಮ್ ಬೂಟ್, ಕೈಗವಸು, ಜಾಕೆಟ್, ಮಾಸ್ಕ್ ಗಳನ್ನು ಒದಗಿಸಿತ್ತು.</p>.<p>ನಂತರ ಜೇವರ್ಗಿ ರಸ್ತೆಯಲ್ಲಿರುವ ನಂದಿಕೂರ ಗ್ರಾಮದಲ್ಲಿರುವ ಕೊಳಚೆ ನೀರು ಶುದ್ಧೀಕರಣ ಘಟಕವನ್ನು ವೀಕ್ಷಿಸಿದರು.</p>.<p>ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಪಾಲಿಕೆಯ ಅಧಿಕಾರಿಗಳು ಈ ಸಂದರ್ಭದಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>