ಕಲಬುರಗಿ: ಯಾದಗಿರಿಯಲ್ಲಿ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ವಾಪಸ್ ಬರುತ್ತಿದ್ದ ಉನ್ನತ ಶಿಕ್ಷಣ, ಐಟಿ, ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲಾಭಿವೃದ್ಧಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರಿದ್ದ ಸರ್ಕಾರಿ ಕಾರಿನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಬೆಂಗಾವಲು ವಾಹನ ಹತ್ತಿ ಕಲಬುರಗಿ ವಿಮಾನ ನಿಲ್ದಾಣ ತಲುಪಿದ್ದಾರೆ.