ಕಲಬುರ್ಗಿ: ಬಳ್ಳಾರಿಯಲ್ಲಿ ಗಣಿ ಮತ್ತು ಭೂವಿಜ್ಞಾನ ಕಾಲೇಜನ್ನು ಆರಂಭಿಸಲಾಗುತ್ತಿದ್ದು, ಈ ಕಾರ್ಯಕ್ರಮಕ್ಕೆ ಕೇಂದ್ರ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಅವರನ್ನು ಆಹ್ವಾನಿಸಲು ದೆಹಲಿಗೆ ತೆರಳಿದ್ದೆ. ಉಳಿದದ್ದು ಮಾಧ್ಯಮಗಳ ಸೃಷ್ಟಿ ಎಂದು ರಾಜ್ಯ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ ನಿರಾಣಿ ಸ್ಪಷ್ಟಪಡಿಸಿದರು.