‘ರಾಜ್ಯ ಸರ್ಕಾರ ಮೂಗಿಗೆ ತುಪ್ಪ ಸವರುವ ಬದಲು ತಲೆಗೆ ತುಪ್ಪ ಹಚ್ಚಿದೆ’ ಎಂಬ ಕಾಂಗ್ರೆಸ್ ಮುಖಂಡರ ಆರೋಪಕ್ಕೆ ಪ್ರತಿಕ್ರಿಯಿಸಿದ ನಿರಾಣಿ, ‘ಹಿಂದೆ ಅಧಿಕಾರದಲ್ಲಿ ಅವರೇ ಇದ್ದರು. ಆದರೂ, ಮೀಸಲಾತಿ ಏಕೆ ನೀಡಲಿಲ್ಲ? ನಮ್ಮ ಸರ್ಕಾರ ಪರಿಶಿಷ್ಟರ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿದೆ. ತಳವಾರ, ಪರಿವಾರ ಸಮುದಾಯವನ್ನು ಎಸ್ಟಿ ಪಟ್ಟಿಗೆ ಸೇರಿಸಿದೆ. ಲಿಂಗಾಯತರು, ಒಕ್ಕಲಿಗರಿಗೂ ಮೀಸಲಾತಿಯನ್ನು ಅವರ ಬೇಡಿಕೆಗೆ ತಕ್ಕಂತೆ ನೀಡಿದೆ. ವಾಸ್ತವವಾಗಿ ಕಾಂಗ್ರೆಸ್ನವರು ತಲೆಗೆ ತುಪ್ಪ ಹಚ್ಚಿದ್ದರು. ನಾವು ಮೀಸಲಾತಿ ನೀಡುವ ಮೂಲಕ ಊಟದೊಂದಿಗೇ ತುಪ್ಪ ಕೊಟ್ಟಿದ್ದೇವೆ’ ಎಂದು ತಿಳಿಸಿದರು.