<p><strong>ಬೆಂಗಳೂರು: </strong>ಕಲಬುರ್ಗಿಯಲ್ಲಿ ಆಭರಣ ತಯಾರಿಕೆ ಘಟಕ (ಜ್ಯುವೆಲ್ಲರಿ ಪಾರ್ಕ್) ಆರಂಭಿಸಲು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ನಿರ್ಧರಿಸಿದ್ದಾರೆ.</p>.<p>ಕಲಬುರ್ಗಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಭಾನುವಾರ ನೇಮಕಗೊಂಡ ಬೆನ್ನಲ್ಲೇ ಅವರು ಈ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಘಟಕವನ್ನು ಬೀದರ್ ಅಥವಾ ಕಲಬುರ್ಗಿಯಲ್ಲಿ ಆರಂಭಿಸುವುದಾಗಿ ಅವರು ಈ ಹಿಂದೆ ಹೇಳಿದ್ದರು.</p>.<p>ಸರ್ಕಾರಿ- ಖಾಸಗಿ ಸಹಭಾಗಿತ್ವದಲ್ಲಿ ಸುಮಾರು 50ರಿಂದ 75 ಎಕರೆ ಜಾಗದಲ್ಲಿಜ್ಯುವೆಲ್ಲರಿ ಪಾರ್ಕ್ ನಿರ್ಮಿಸಲಾಗುವುದು. ಅಭರಣಗಳ ತಯಾರಿಕೆ, ಗ್ರಾಹಕರು ಒಂದೇ ಸೂರಿನಡಿ ಖರೀದಿಗೆ ಅವಕಾಶ ಮಾಡಿಕೊಡುವುದರ ಜೊತೆಗೆ, ದೇಶ- ವಿದೇಶಕ್ಕೆ ಇಲ್ಲಿಂದಲೇ ಪೂರೈಕೆ ಮಾಡಲಾಗುವುದು ಎಂದು ನಿರಾಣಿ ತಿಳಿಸಿದ್ದಾರೆ.</p>.<p>ಹಿಂದುಳಿದ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ವಿಶೇಷ ಒತ್ತು ಕೊಡುವ ಸಂವಿಧಾನದ 371ನೇ (ಜೆ) ಕಾಯ್ದೆಗೆ ತಿದ್ದುಪಡಿ ಮಾಡಿರುವುದರಿಂದ ಈ ಭಾಗದಲ್ಲಿ ಉದ್ಯೋಗ ಸೃಷ್ಟಿಗೂ ಅವಕಾಶ ಆಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p>‘ಈ ಭಾಗದ ಶಾಸಕರು, ಸಂಸದರು ಸೇರಿದಂತೆ ಪಕ್ಷಾತೀತವಾಗಿ ಎಲ್ಲ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸುತ್ತೇನೆ.ಶೀಘ್ರದಲ್ಲಿ ಜಿಲ್ಲೆಯ ಅಧಿಕಾರಿಗಳ ಸಭೆ ಕರೆದು ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸುತ್ತೇನೆ’ ನಡೆಸುತ್ತೇನೆ’ ಎಂದು ನಿರಾಣಿ ಹೇಳಿದ್ದಾರೆ.</p>.<p>‘ಇಂಥದ್ದೇ ಜಿಲ್ಲೆಯ ಉಸ್ತುವಾರಿ ಕೊಡುವಂತೆ ಮುಖ್ಯಮಂತ್ರಿ ಬಳಿ ಬೇಡಿಕೆ ಇಟ್ಟಿರಲಿಲ್ಲ. ಸಚಿವ ಸಂಪುಟಕ್ಕೆ ತೆಗೆದುಕೊಳ್ಳುವಾಗ ಮತ್ತು ಖಾತೆ ಹಂಚಿಕೆ ಮಾಡುವಾಗಲೂ ಯಾವುದೇ ಒತ್ತಡ ಹಾಕಿರಲಿಲ್ಲ. ಮೊದಲಿನಿಂದಲೂ ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕಲಬುರ್ಗಿಯಲ್ಲಿ ಆಭರಣ ತಯಾರಿಕೆ ಘಟಕ (ಜ್ಯುವೆಲ್ಲರಿ ಪಾರ್ಕ್) ಆರಂಭಿಸಲು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ನಿರ್ಧರಿಸಿದ್ದಾರೆ.</p>.<p>ಕಲಬುರ್ಗಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಭಾನುವಾರ ನೇಮಕಗೊಂಡ ಬೆನ್ನಲ್ಲೇ ಅವರು ಈ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಘಟಕವನ್ನು ಬೀದರ್ ಅಥವಾ ಕಲಬುರ್ಗಿಯಲ್ಲಿ ಆರಂಭಿಸುವುದಾಗಿ ಅವರು ಈ ಹಿಂದೆ ಹೇಳಿದ್ದರು.</p>.<p>ಸರ್ಕಾರಿ- ಖಾಸಗಿ ಸಹಭಾಗಿತ್ವದಲ್ಲಿ ಸುಮಾರು 50ರಿಂದ 75 ಎಕರೆ ಜಾಗದಲ್ಲಿಜ್ಯುವೆಲ್ಲರಿ ಪಾರ್ಕ್ ನಿರ್ಮಿಸಲಾಗುವುದು. ಅಭರಣಗಳ ತಯಾರಿಕೆ, ಗ್ರಾಹಕರು ಒಂದೇ ಸೂರಿನಡಿ ಖರೀದಿಗೆ ಅವಕಾಶ ಮಾಡಿಕೊಡುವುದರ ಜೊತೆಗೆ, ದೇಶ- ವಿದೇಶಕ್ಕೆ ಇಲ್ಲಿಂದಲೇ ಪೂರೈಕೆ ಮಾಡಲಾಗುವುದು ಎಂದು ನಿರಾಣಿ ತಿಳಿಸಿದ್ದಾರೆ.</p>.<p>ಹಿಂದುಳಿದ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ವಿಶೇಷ ಒತ್ತು ಕೊಡುವ ಸಂವಿಧಾನದ 371ನೇ (ಜೆ) ಕಾಯ್ದೆಗೆ ತಿದ್ದುಪಡಿ ಮಾಡಿರುವುದರಿಂದ ಈ ಭಾಗದಲ್ಲಿ ಉದ್ಯೋಗ ಸೃಷ್ಟಿಗೂ ಅವಕಾಶ ಆಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p>‘ಈ ಭಾಗದ ಶಾಸಕರು, ಸಂಸದರು ಸೇರಿದಂತೆ ಪಕ್ಷಾತೀತವಾಗಿ ಎಲ್ಲ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸುತ್ತೇನೆ.ಶೀಘ್ರದಲ್ಲಿ ಜಿಲ್ಲೆಯ ಅಧಿಕಾರಿಗಳ ಸಭೆ ಕರೆದು ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸುತ್ತೇನೆ’ ನಡೆಸುತ್ತೇನೆ’ ಎಂದು ನಿರಾಣಿ ಹೇಳಿದ್ದಾರೆ.</p>.<p>‘ಇಂಥದ್ದೇ ಜಿಲ್ಲೆಯ ಉಸ್ತುವಾರಿ ಕೊಡುವಂತೆ ಮುಖ್ಯಮಂತ್ರಿ ಬಳಿ ಬೇಡಿಕೆ ಇಟ್ಟಿರಲಿಲ್ಲ. ಸಚಿವ ಸಂಪುಟಕ್ಕೆ ತೆಗೆದುಕೊಳ್ಳುವಾಗ ಮತ್ತು ಖಾತೆ ಹಂಚಿಕೆ ಮಾಡುವಾಗಲೂ ಯಾವುದೇ ಒತ್ತಡ ಹಾಕಿರಲಿಲ್ಲ. ಮೊದಲಿನಿಂದಲೂ ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>