<p><strong>ವಾಡಿ</strong>: ಸಚಿವ ಬಿ.ಸಿ. ನಾಗೇಶ ನಾಲವಾರ ಶ್ರೀಕೋರಿಸಿದ್ದೇಶ್ವರ ಸಂಸ್ಥಾನ ಮಠಕ್ಕೆ ಭೇಟಿ ನೀಡಿ ಡಾ. ಸಿದ್ದ ತೋಟೇಂದ್ರ ಶಿವಾಚಾರ್ಯರ ಆಶೀರ್ವಾದ ಪಡೆದರು.</p>.<p>ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ಪ್ರಾಥಮಿಕ, ಫ್ರೌಢಶಿಕ್ಷಣ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ರವಿವಾರ ಮಠಕ್ಕೆ ಭೇಟಿ ನೀಡಿದ ಅವರು ಕೋರಿಸಿದ್ದೇಶ್ವರರ ಗದ್ದುಗೆಗೆ ಪೂಜೆ ಸಲ್ಲಿಸಿದರು. ನಂತರ ಶ್ರೀಗಳಿಂದ ಆಶಿರ್ವಾದ ಪಡೆದರು.</p>.<p>ಈ ವೇಳೆ ಮಾತನಾಡಿದ ಸಿದ್ದ ತೋಟೇಂದ್ರ ಶಿವಾಚಾರ್ಯರು, ಕೊವೀಡ್ನಿಂದ ಶೈಕ್ಷಣಿಕ ಜೀವನಕ್ಕೆ ಪೆಟ್ಟು ಬಿದ್ದಿದೆ. ವಿದ್ಯಾರ್ಥಿಗಳು ಅತಂತ್ರರಾ ಗಿದ್ದಾರೆ. ಬಾಲಕಾರ್ಮಿಕರಾಗಿರುವ ಉದಾಹರಣೆಗಳಿವೆ. ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಹಾಗೂ ಸಮಾಜ ಸುಧಾರಣೆಗಾಗಿ ಸಿಕ್ಕ ಸಮಯ ಸದುಪಯೋಗ ಪಡಿಸಿಕೊಳ್ಳಿ ಎಂದರು.</p>.<p>ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಲಿಂಗಾರೆಡ್ಡಿಗೌಡ ಜಿ. ಬಾಸರೆಡ್ಡಿ, ಡಾ.ಶರಣ ಭೂಪಾಲರೆಡ್ಡಿ, ಗುರು ಕಾಮಾ, ಮಹೇಶ ವೀರಯ್ಯ ಸ್ವಾಮಿ ಚಿಂಚೋಳಿ, ಮಹಾದೇವ ಗಂವ್ಹಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಡಿ</strong>: ಸಚಿವ ಬಿ.ಸಿ. ನಾಗೇಶ ನಾಲವಾರ ಶ್ರೀಕೋರಿಸಿದ್ದೇಶ್ವರ ಸಂಸ್ಥಾನ ಮಠಕ್ಕೆ ಭೇಟಿ ನೀಡಿ ಡಾ. ಸಿದ್ದ ತೋಟೇಂದ್ರ ಶಿವಾಚಾರ್ಯರ ಆಶೀರ್ವಾದ ಪಡೆದರು.</p>.<p>ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ಪ್ರಾಥಮಿಕ, ಫ್ರೌಢಶಿಕ್ಷಣ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ರವಿವಾರ ಮಠಕ್ಕೆ ಭೇಟಿ ನೀಡಿದ ಅವರು ಕೋರಿಸಿದ್ದೇಶ್ವರರ ಗದ್ದುಗೆಗೆ ಪೂಜೆ ಸಲ್ಲಿಸಿದರು. ನಂತರ ಶ್ರೀಗಳಿಂದ ಆಶಿರ್ವಾದ ಪಡೆದರು.</p>.<p>ಈ ವೇಳೆ ಮಾತನಾಡಿದ ಸಿದ್ದ ತೋಟೇಂದ್ರ ಶಿವಾಚಾರ್ಯರು, ಕೊವೀಡ್ನಿಂದ ಶೈಕ್ಷಣಿಕ ಜೀವನಕ್ಕೆ ಪೆಟ್ಟು ಬಿದ್ದಿದೆ. ವಿದ್ಯಾರ್ಥಿಗಳು ಅತಂತ್ರರಾ ಗಿದ್ದಾರೆ. ಬಾಲಕಾರ್ಮಿಕರಾಗಿರುವ ಉದಾಹರಣೆಗಳಿವೆ. ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಹಾಗೂ ಸಮಾಜ ಸುಧಾರಣೆಗಾಗಿ ಸಿಕ್ಕ ಸಮಯ ಸದುಪಯೋಗ ಪಡಿಸಿಕೊಳ್ಳಿ ಎಂದರು.</p>.<p>ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಲಿಂಗಾರೆಡ್ಡಿಗೌಡ ಜಿ. ಬಾಸರೆಡ್ಡಿ, ಡಾ.ಶರಣ ಭೂಪಾಲರೆಡ್ಡಿ, ಗುರು ಕಾಮಾ, ಮಹೇಶ ವೀರಯ್ಯ ಸ್ವಾಮಿ ಚಿಂಚೋಳಿ, ಮಹಾದೇವ ಗಂವ್ಹಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>