ಅಧ್ಯಕ್ಷತೆ ವಹಿಸಿದ್ದ ಸಿಪಿಐ ಕೃಷ್ಣಪ್ಪ ಕಲ್ಲದೇವರು, ಮುಖ್ಯ ಅತಿಥಿಗಳಾಗಿದ್ದ ವಕೀಲರ ಸಂಘದ ಅಧ್ಯಕ್ಷ ಗಿರಿಧರ ಆರ್. ವೈಷ್ಣವ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ತಾಲ್ಲೂಕು ಅಧಿಕಾರಿ ಮೇಘರಾಜ ರಾಠೋಡ್ ಮಾತನಾಡಿದರು. ವಕೀಲರಾದ ಎಸ್.ಪಿ ಸಾತನೂರಕರ್, ಅಯ್ಯಣ್ಣ ಅವಂಟಿ ಅವರು ಉಪನ್ಯಾಸ ನೀಡಿದರು. ಸಹಾಯಕ ಸರ್ಕಾರಿ ಅಭಿಯೋಜಕಿ ಅಂಜನಾದೇವಿ, ಪಿಎಸ್ಐ ಶ್ರೀಶೈಲ್ ಅಂಬಾಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ಧವೀರಯ್ಯ ರುದ್ನೂರ ಮುಖ್ಯ ಅತಿಥಿಗಳಾಗಿದ್ದರು. ವಕೀಲರ ಸಂಘದ ಕಾರ್ಯದರ್ಶಿ ಈಶ್ವರ ಅಳ್ಳೊಳ್ಳಿ ನಿರೂಪಿಸಿದರು. ಉದಯಕುಮಾರ ಸಾಗರ ವಂದಿಸಿದರು.