<p><strong>ಯಾದಗಿರಿ:</strong> ‘ಅಭಿವೃದ್ಧಿ ವಿಷಯದಲ್ಲಿ ನಾನು ಎಂದಿಗೂ ತಾರತಮ್ಯ ಮಾಡಿಲ್ಲ. ಕ್ಷೇತ್ರದ ಜನತೆ ನನಗೆ ಕಳೆದ ಚುನಾವಣೆಯಲ್ಲಿ ಆಶೀರ್ವಾದ ಮಾಡಿ ವಿಧಾನಸಭೆಗೆ ಕಳಿಸಿದ್ದು, ನಿಮ್ಮೆಲ್ಲರ ಸಹಕಾರದಿಂದ ನಿರೀಕ್ಷೆ ಹುಸಿಗೊಳಿಸದಂತೆ ಕೆಲಸ ಮಾಡುತ್ತೇನೆ’ ಎಂದು ಶಾಸಕ ನಾಗನಗೌಡ ಕಂದಕೂರ ಹೇಳಿದರು.</p>.<p>ಗುರುಮಠಕಲ್ ತಾಲ್ಲೂಕಿನ ಯಲ್ಹೇರಿ ಗ್ರಾಮದಲ್ಲಿ ಲೋಕೊಪಯೋಗಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ರಸ್ತೆ ಸುಧಾರಣೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.<br />‘ಈ ಹಿಂದೆ ಆಡಳಿತದಲ್ಲಿದ್ದ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕ್ಷೇತ್ರಕ್ಕೆ ಕೊಟ್ಟಿದ್ದ ಅನುದಾನವನ್ನು ಬಿಜೆಪಿ ಸರ್ಕಾರ ವಾಪಸ್ ಪಡೆದುಕೊಳ್ಳುವ ಮೂಲಕ ದ್ವೇಷದ ರಾಜಕೀಯಕ್ಕೆ ನಾಂದಿ ಹಾಡುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಗಡಿ ಭಾಗದಲ್ಲಿರುವ ಕ್ಷೇತ್ರದಲ್ಲಿ ಮೂಲಸೌಕರ್ಯ ಒದಗಿಸಲು ಬದ್ಧನಾಗಿದ್ದು, ಜನತೆಗೆ ಚುನಾವಣೆ ವೇಳೆ ಕೊಟ್ಟ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ’ ಎಂದರು.<br />ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾಂತಾ, ಜಿಲ್ಲಾ ಪಂಚಾಯಿತಿ ಸದಸ್ಯೆ ರಾಜಶ್ರೀ ನಜರಾಪುರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ‘ಅಭಿವೃದ್ಧಿ ವಿಷಯದಲ್ಲಿ ನಾನು ಎಂದಿಗೂ ತಾರತಮ್ಯ ಮಾಡಿಲ್ಲ. ಕ್ಷೇತ್ರದ ಜನತೆ ನನಗೆ ಕಳೆದ ಚುನಾವಣೆಯಲ್ಲಿ ಆಶೀರ್ವಾದ ಮಾಡಿ ವಿಧಾನಸಭೆಗೆ ಕಳಿಸಿದ್ದು, ನಿಮ್ಮೆಲ್ಲರ ಸಹಕಾರದಿಂದ ನಿರೀಕ್ಷೆ ಹುಸಿಗೊಳಿಸದಂತೆ ಕೆಲಸ ಮಾಡುತ್ತೇನೆ’ ಎಂದು ಶಾಸಕ ನಾಗನಗೌಡ ಕಂದಕೂರ ಹೇಳಿದರು.</p>.<p>ಗುರುಮಠಕಲ್ ತಾಲ್ಲೂಕಿನ ಯಲ್ಹೇರಿ ಗ್ರಾಮದಲ್ಲಿ ಲೋಕೊಪಯೋಗಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ರಸ್ತೆ ಸುಧಾರಣೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.<br />‘ಈ ಹಿಂದೆ ಆಡಳಿತದಲ್ಲಿದ್ದ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕ್ಷೇತ್ರಕ್ಕೆ ಕೊಟ್ಟಿದ್ದ ಅನುದಾನವನ್ನು ಬಿಜೆಪಿ ಸರ್ಕಾರ ವಾಪಸ್ ಪಡೆದುಕೊಳ್ಳುವ ಮೂಲಕ ದ್ವೇಷದ ರಾಜಕೀಯಕ್ಕೆ ನಾಂದಿ ಹಾಡುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಗಡಿ ಭಾಗದಲ್ಲಿರುವ ಕ್ಷೇತ್ರದಲ್ಲಿ ಮೂಲಸೌಕರ್ಯ ಒದಗಿಸಲು ಬದ್ಧನಾಗಿದ್ದು, ಜನತೆಗೆ ಚುನಾವಣೆ ವೇಳೆ ಕೊಟ್ಟ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ’ ಎಂದರು.<br />ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾಂತಾ, ಜಿಲ್ಲಾ ಪಂಚಾಯಿತಿ ಸದಸ್ಯೆ ರಾಜಶ್ರೀ ನಜರಾಪುರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>