ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಹಿಂದೆ ನನ್ನನ್ನು ಸೋಲಿಸಲು ವಿಜಯೇಂದ್ರ ಹಣ ಕಳುಹಿಸಿದ್ದ. ಯಡಿಯೂರಪ್ಪ ಕುಟುಂಬದಲ್ಲಿ ಒಬ್ಬ ಮಗ ಕ್ಯಾಬಿನೆಟ್ ಮಂತ್ರಿಯಾಗಬೇಕು, ಇನ್ನೊಬ್ಬ ಮಗ ಮುಖ್ಯಮಂತ್ರಿಯಾಗಬೇಕು. ಇನ್ನು ಅವರ ಮನೆಯ ಕೆಲವರು ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಸದಸ್ಯರಾಗಬೇಕು. ಇದು ಯಡಿಯೂರಪ್ಪ ಅವರ ಕೊನೆಯ ಕನಸು’ ಎಂದು ಹರಿಹಾಯ್ದರು.