ಇಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಎರಡು ತಿಂಗಳ ಹಿಂದೆ ಬಿಜೆಪಿಯ ಜವಾಬ್ದಾರಿಯುತ ಮುಖಂಡರೊಬ್ಬರು ನನ್ನನ್ನು ಭೇಟಿಯಾಗಿದ್ದರು. ಕಾಂಗ್ರೆಸ್ನಲ್ಲಿ ನಿಮಗೆ ಅನ್ಯಾಯವಾಗುತ್ತಿದೆ. ಅಲ್ಲಿಂದ ಹೊರ ಬನ್ನಿ. ಚುನಾವಣೆಯ ಖರ್ಚು ನೋಡಿಕೊಳ್ಳುತ್ತೇವೆ ಎಂದಿದ್ದರು. ಇದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು, ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಡುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.