<p><strong>ಕಲಬುರಗಿ:</strong> ‘ಕಲಬುರಗಿಯನ್ನು ಸ್ವಚ್ಛ ನಗರ ಮಾಡುವಲ್ಲಿ ಅಧಿಕಾರಿಗಳು ಶ್ರಮವಹಿಸಬೇಕು. ಅಗತ್ಯವಿದ್ದ ಕಡೆಗೆ ಹೆಚ್ಚಿನ ಪೌರಕಾರ್ಮಿಕರನ್ನು ನಿಯೋಜಿಸಿಕೊಂಡು ಕೆಲಸ ಮಾಡಿಸಬೇಕು. ಮಾಲಿನ್ಯ ಕಂಡುಬರದಂತೆ ನಿರಂತರ ಎಚ್ಚರಿಕೆ ವಹಿಸಬೇಕು’ ಎಂದುಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಸೂಚನೆ ನೀಡಿದರು.</p>.<p>ನಗರದ 35ನೇ ವಾರ್ಡಿಗೆ ಶನಿವಾರ ಭೇಟಿ ನೀಡಿದ ಅವರು ಜನರ ಸಮಸ್ಯೆಗಳನ್ನು ಆಲಿಸಿದರು.ಈ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಮಕ್ತಂಪುರ, ಹೋಳಿಕಟ್ಟ, ಚಕ್ರಕಟ್ಟ, ಗಾಜಿಪುರ, ಸಿದ್ಧೇಶ್ವರ ಕಾಲೊನಿ, ಗದ್ದುಗೆಮಠ, ಗಣೇಶ ಮಂದಿರ ಪ್ರದೇಶ ಸೇರಿದಂತೆ ವಿವಿಧೆಡೆ ಸಂಚರಿಸಿದರು.</p>.<p>ಎಲ್ಲೆಂದರಲ್ಲಿ ಕಟ್ಟಿಕೊಂಡಚರಂಡಿ, ರಸ್ತೆ ಪಕ್ಕದಲ್ಲೇ ಬಿದ್ದ ಕಸದ ಗುಡ್ಡೆ, ಮಲಿನ ವಾತಾವರಣ ಕಂಡು ಶಾಸಕರು ಗರಂ ಆದರು. ಜನರ ಕೆಲಸ ಮಾಡುವುದಕ್ಕಾಗಿಯೇ ಇರುವ ಅಧಿಕಾರಿಗಳು ಬೇಜವಾಬ್ದಾರಿ ತೋರಕೂಡದು. ಪ್ರತಿ ದಿನ ತ್ಯಾಜ್ಯ ವಿಲೇವಾರಿಗೆ ಗಮನ ಕೊಡಬೇಕು ಎಂದು ಸೂಚಿಸಿದರು.</p>.<p>ಪಾಲಿಕೆ ಸದಸ್ಯ ವಿಜಯಕುಮಾರ ಸೇವಲಾನಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಯಾಘನ್ ಧಾರವಾಡಕರ್, ಎಪಿಎಂಸಿ ಅಧ್ಯಕ್ಷ ಅಪ್ಪು ಕಣಕಿ ಇದ್ದರು. ಪಾಲಿಕೆಯ ಉಪ ಆಯುಕ್ತ ಆರ್.ಪಿ.ಜಾಧವ, ಎಂಜಿನಿಯರ್ ಕೆ.ಎಸ್.ಪಾಟೀಲ, ಜೆಸ್ಕಾಂ, ನಗರ ನೀರು ಸರಬರಾಜು ಮತ್ತು ಒಳಚತಂಡಿ ಮಂಡಳಿ ಅಧಿಕಾರಿಗಳೂ ಇದ್ದರು.</p>.<p>ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು, ರಸ್ತೆ ದುರಸ್ತಿ ಮಾಡಬೇಕು. ಚರಂಡಿಗಳು ಕಟ್ಟಿಕೊಂಡಿದ್ದರಿಂದ ಪರಿಸರ ಮಾಲಿನ್ಯ ಉಂಟಾಗಿದ್ದು, ಇದನ್ನು ಸ್ವಚ್ಛಗೊಳಿಸಬೇಕು ಎಂಬ ಇತ್ಯಾದಿ ಬೇಡಿಕೆಗಳನ್ನು ಜನ ಶಾಸಕರಿಗೆ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ‘ಕಲಬುರಗಿಯನ್ನು ಸ್ವಚ್ಛ ನಗರ ಮಾಡುವಲ್ಲಿ ಅಧಿಕಾರಿಗಳು ಶ್ರಮವಹಿಸಬೇಕು. ಅಗತ್ಯವಿದ್ದ ಕಡೆಗೆ ಹೆಚ್ಚಿನ ಪೌರಕಾರ್ಮಿಕರನ್ನು ನಿಯೋಜಿಸಿಕೊಂಡು ಕೆಲಸ ಮಾಡಿಸಬೇಕು. ಮಾಲಿನ್ಯ ಕಂಡುಬರದಂತೆ ನಿರಂತರ ಎಚ್ಚರಿಕೆ ವಹಿಸಬೇಕು’ ಎಂದುಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಸೂಚನೆ ನೀಡಿದರು.</p>.<p>ನಗರದ 35ನೇ ವಾರ್ಡಿಗೆ ಶನಿವಾರ ಭೇಟಿ ನೀಡಿದ ಅವರು ಜನರ ಸಮಸ್ಯೆಗಳನ್ನು ಆಲಿಸಿದರು.ಈ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಮಕ್ತಂಪುರ, ಹೋಳಿಕಟ್ಟ, ಚಕ್ರಕಟ್ಟ, ಗಾಜಿಪುರ, ಸಿದ್ಧೇಶ್ವರ ಕಾಲೊನಿ, ಗದ್ದುಗೆಮಠ, ಗಣೇಶ ಮಂದಿರ ಪ್ರದೇಶ ಸೇರಿದಂತೆ ವಿವಿಧೆಡೆ ಸಂಚರಿಸಿದರು.</p>.<p>ಎಲ್ಲೆಂದರಲ್ಲಿ ಕಟ್ಟಿಕೊಂಡಚರಂಡಿ, ರಸ್ತೆ ಪಕ್ಕದಲ್ಲೇ ಬಿದ್ದ ಕಸದ ಗುಡ್ಡೆ, ಮಲಿನ ವಾತಾವರಣ ಕಂಡು ಶಾಸಕರು ಗರಂ ಆದರು. ಜನರ ಕೆಲಸ ಮಾಡುವುದಕ್ಕಾಗಿಯೇ ಇರುವ ಅಧಿಕಾರಿಗಳು ಬೇಜವಾಬ್ದಾರಿ ತೋರಕೂಡದು. ಪ್ರತಿ ದಿನ ತ್ಯಾಜ್ಯ ವಿಲೇವಾರಿಗೆ ಗಮನ ಕೊಡಬೇಕು ಎಂದು ಸೂಚಿಸಿದರು.</p>.<p>ಪಾಲಿಕೆ ಸದಸ್ಯ ವಿಜಯಕುಮಾರ ಸೇವಲಾನಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಯಾಘನ್ ಧಾರವಾಡಕರ್, ಎಪಿಎಂಸಿ ಅಧ್ಯಕ್ಷ ಅಪ್ಪು ಕಣಕಿ ಇದ್ದರು. ಪಾಲಿಕೆಯ ಉಪ ಆಯುಕ್ತ ಆರ್.ಪಿ.ಜಾಧವ, ಎಂಜಿನಿಯರ್ ಕೆ.ಎಸ್.ಪಾಟೀಲ, ಜೆಸ್ಕಾಂ, ನಗರ ನೀರು ಸರಬರಾಜು ಮತ್ತು ಒಳಚತಂಡಿ ಮಂಡಳಿ ಅಧಿಕಾರಿಗಳೂ ಇದ್ದರು.</p>.<p>ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು, ರಸ್ತೆ ದುರಸ್ತಿ ಮಾಡಬೇಕು. ಚರಂಡಿಗಳು ಕಟ್ಟಿಕೊಂಡಿದ್ದರಿಂದ ಪರಿಸರ ಮಾಲಿನ್ಯ ಉಂಟಾಗಿದ್ದು, ಇದನ್ನು ಸ್ವಚ್ಛಗೊಳಿಸಬೇಕು ಎಂಬ ಇತ್ಯಾದಿ ಬೇಡಿಕೆಗಳನ್ನು ಜನ ಶಾಸಕರಿಗೆ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>