ಸೇಡಂ: ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ ಅವರು, ತಮ್ಮ ‘ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿ’ಯಲ್ಲಿ ಹೆಚ್ಚಿನ ಪಾಲನ್ನು
ದೇವಾಲಯ ಹಾಗೂ ಧಾರ್ಮಿಕ ಕ್ಷೇತ್ರಗಳ ನಿರ್ಮಾಣ ಹಾಗೂ ಜೀರ್ಣೋದ್ಧಾರಕ್ಕೆ ಬಳಸಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ದುರಸ್ತಿ, ಕಾಂಪೌಂಡ್ ನಿರ್ಮಾಣ, ಶೌಚಾಲಯ ಸೇರಿದಂತೆ ಇನ್ನಿತರ ಮೌಲಸೌಕರ್ಯಗಳಿಗೆ ಎರಡನೇ ಆದ್ಯತೆ ನೀಡಿದ್ದಾರೆ.