ಕಲಬುರ್ಗಿ: ಜನಪರ- ರೈತಪರ ಹೋರಾಟಗಾರ ಮಾರುತಿ ಮಾನ್ಪಡೆ ಸಾವಿನ ಕುರಿತಾದ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರ ಹೇಳಿಕೆ ನಾಚಿಕೆಗೇಡಿನದ್ದು ಎಂದು ಕೆಪಿಸಿಸಿ ವಕ್ತಾರ ಹಾಗೂ ಶಾಸಕರಾದ ಪ್ರಿಯಾಂಕ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟ್ವೀಟ್ ಮೂಲಕ ತಮ್ಮ ಅಸಮಧಾನ ಹೊರಹಾಕಿರುವ ಅವರು, ‘ಕೇಂದ್ರ ಸರ್ಕಾರ ಜಾರಿಗೆ ತಂದ ರೈತ ವಿರೋಧಿ ಮಸೂದೆಗಳ ವಿರುದ್ಧ ಮಾನ್ಪಡೆಯವರು ಹೋರಾಡುತ್ತಲೇ ಬಂದಿದ್ದರು. ಆದರೆ ಮಾನ್ಪಡೆ ಸಾವಿಗೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ ಕಾರಣ ಎಂಬ ಆರೋಪ ಸದಾನಂದಗೌಡರ ಮನಸ್ಥಿತಿ ತೋರಿಸುತ್ತದೆ’ ಎಂದಿದ್ದಾರೆ.
‘ಕೊರೊನಾದಂತ ಸಾಂಕ್ರಾಮಿಕ ಸಂದರ್ಭದಲ್ಲಿ ಲಜ್ಜೆಗೆಟ್ಟ ಬಿಜೆಪಿ ಸರ್ಕಾರದ ರೈತ ವಿರೋಧಿ ಮಸೂದೆ ಜಾರಿಗೆ ತಂದಾಗ ಮಾನ್ಪಡೆಯವರು ಹೋರಾಟಕ್ಕಿಳಿದಿದ್ದರು. ಆದರೆ ಈಗ ಅವರ ಸಾವಿನ ಕುರಿತಾಗಿ ಕೇಂದ್ರ ಸಚಿವರ ಹೇಳಿಕೆ ನಾಚಿಕೆಗೇಡಿನದ್ದು’ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.
ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಬಿಜೆಪಿ ಸರಕಾರ ಕೊಡುಗೆ ಏನು? ಎಂದು ಪ್ರಶ್ನಿಸಿರುವ ಅವರು, ನೆರೆ ಹಾವಳಿ ಸಂದರ್ಭದಲ್ಲಿ ಭೇಟಿ ನೀಡಲಿಲ್ಲವೇಕೆ ? ಎಂದು ಸದಾನಂದಗೌಡವರನ್ನು ಶ್ರೀ ಪ್ರಿಯಾಂಕ್ ಖರ್ಗೆ ಕುಟುಕಿದ್ದಾರೆ.
Disgraceful of Sri @DVSadanandGowda to comment on Sri. Manpade’s death. He fought against your of anti farmers bill that @BJP4India shamelessly bought in during a pandemic. What has been @BJP4Karnataka contribution for KK region? Why didn’t you visit us?https://t.co/wJCP8OPzZz
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) October 28, 2020