ತೆಲ್ಕೂರ ಅವರು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹುದ್ದೆಯ ಆಕಾಂಕ್ಷಿಯಾಗಿದ್ದರು. ಆದರೆ, ಆ ಸ್ಥಾನ ಕಲಬುರ್ಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅವರ ಪಾಲಾಗಿತ್ತು. ಇದರಿಂದ ಮುನಿಸಿಕೊಂಡಿದ್ದ ತೆಲ್ಕೂರ, ಎನ್ಇಕೆಆರ್ಟಿಸಿ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳಲು ಆರಂಭದಲ್ಲಿ ನಿರಾಕರಿಸಿದ್ದರು. ಶನಿವಾರ ತೆಲ್ಕೂರ ಅವರನ್ನು ಬೆಂಗಳೂರಿಗೆ ಕರೆಸಿಕೊಂಡಿದ್ದ ಯಡಿಯೂರಪ್ಪ ಅವರು ಕಾರ್ಯಕ್ರಮದಲ್ಲಿ ಖುದ್ದು ಉಪಮುಖ್ಯಮಂತ್ರಿಗಳೂ ಆದ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರನ್ನು ಕಳಿಸಿಕೊಡುವುದಾಗಿ ಹೇಳಿದರು. ಅದರಂತೆ ಸವದಿ ಅವರು ಅಂದು ಬೆಳಿಗ್ಗೆ 10.30ಕ್ಕೆ ಅಥಣಿಯಿಂದ ಬರಲಿದ್ದು, ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸುವರು.