ಸರ್ಕಾರಕ್ಕೆ ಹಾನಿಯ ವರದಿ ಸಲ್ಲಿಸಿ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಅವರು, ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸುವಂತೆ ಸ್ಥಳದಲ್ಲಿದ್ದ ಉಪ ವಿಭಾಗಾಧಿಕಾರಿ ರಮೇಶ ಕೋಲಾರ ಮತ್ತು ತಹಶೀಲ್ದಾರ್ ಅರುಣಕುಮಾರ ಕುಲಕರ್ಣಿ ಅವರಿಗೆ ಸೂಚಿಸಿದರು.
ಶಾಸಕರು ನಾಗಾಈದಲಾಯಿ, ದೇಗಲಮಡಿ, ಕಲ್ಲೂರು ರೋಡ, ಚಿಂಚೋಳಿ, ಕೊಳ್ಳೂರು ಮೊದಲಾದ ಕಡೆ ಭೇಟಿ ನೀಡಿದರು.