<p><strong>ಚಿಂಚೋಳಿ: </strong>ತಾಲ್ಲೂಕಿನ ಪ್ರವಾಹ ಪೀಡಿತ ಗ್ರಾಮಗಳಿಗೆ ಶಾಸಕ ಡಾ. ಅವಿನಾಶ ಜಾಧವ ಗುರುವಾರ ಭೇಟಿ ನೀಡಿ ಪ್ರವಾಹದಿಂದ ಉಂಟಾದ ಹಾನಿ ಪರಿಶೀಲಿಸಿದರು.</p>.<p>ಮನೆಗಳಿಗೆ ನೀರು ನುಗ್ಗಿ ಬದುಕು ದುಸ್ತರಗೊಂಡ ಜನರ ಬವಣೆ ಆಲಿಸಿ ಧೈರ್ಯ ತುಂಬಿದರು.</p>.<p>ಸರ್ಕಾರಕ್ಕೆ ಹಾನಿಯ ವರದಿ ಸಲ್ಲಿಸಿ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಅವರು, ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸುವಂತೆ ಸ್ಥಳದಲ್ಲಿದ್ದ ಉಪ ವಿಭಾಗಾಧಿಕಾರಿ ರಮೇಶ ಕೋಲಾರ ಮತ್ತು ತಹಶೀಲ್ದಾರ್ ಅರುಣಕುಮಾರ ಕುಲಕರ್ಣಿ ಅವರಿಗೆ ಸೂಚಿಸಿದರು.<br />ಶಾಸಕರು ನಾಗಾಈದಲಾಯಿ, ದೇಗಲಮಡಿ, ಕಲ್ಲೂರು ರೋಡ, ಚಿಂಚೋಳಿ, ಕೊಳ್ಳೂರು ಮೊದಲಾದ ಕಡೆ ಭೇಟಿ ನೀಡಿದರು.</p>.<p>ಕಾರ್ಯ ನಿರ್ವಾಹಕ ಅಧಿಕಾರಿ ಅನಿಲ ರಾಠೋಡ್, ಬಿಜೆಪಿ ಮುಖಂಡರಾದ ವೀರಾರೆಡ್ಡಿ ಪಾಟೀಲ, ಅಲ್ಲಮಪ್ರಭು ಹುಲಿ, ಜಗದೀಶಸಿಂಗ್ ಠಾಕೂರು, ವಿಶ್ವನಾಥ ಈದಲಾಯಿ, ಉದಯ ಸಿಂಧೋಲ, ರಾಕೇಶ ಗೋಸುಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂಚೋಳಿ: </strong>ತಾಲ್ಲೂಕಿನ ಪ್ರವಾಹ ಪೀಡಿತ ಗ್ರಾಮಗಳಿಗೆ ಶಾಸಕ ಡಾ. ಅವಿನಾಶ ಜಾಧವ ಗುರುವಾರ ಭೇಟಿ ನೀಡಿ ಪ್ರವಾಹದಿಂದ ಉಂಟಾದ ಹಾನಿ ಪರಿಶೀಲಿಸಿದರು.</p>.<p>ಮನೆಗಳಿಗೆ ನೀರು ನುಗ್ಗಿ ಬದುಕು ದುಸ್ತರಗೊಂಡ ಜನರ ಬವಣೆ ಆಲಿಸಿ ಧೈರ್ಯ ತುಂಬಿದರು.</p>.<p>ಸರ್ಕಾರಕ್ಕೆ ಹಾನಿಯ ವರದಿ ಸಲ್ಲಿಸಿ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಅವರು, ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸುವಂತೆ ಸ್ಥಳದಲ್ಲಿದ್ದ ಉಪ ವಿಭಾಗಾಧಿಕಾರಿ ರಮೇಶ ಕೋಲಾರ ಮತ್ತು ತಹಶೀಲ್ದಾರ್ ಅರುಣಕುಮಾರ ಕುಲಕರ್ಣಿ ಅವರಿಗೆ ಸೂಚಿಸಿದರು.<br />ಶಾಸಕರು ನಾಗಾಈದಲಾಯಿ, ದೇಗಲಮಡಿ, ಕಲ್ಲೂರು ರೋಡ, ಚಿಂಚೋಳಿ, ಕೊಳ್ಳೂರು ಮೊದಲಾದ ಕಡೆ ಭೇಟಿ ನೀಡಿದರು.</p>.<p>ಕಾರ್ಯ ನಿರ್ವಾಹಕ ಅಧಿಕಾರಿ ಅನಿಲ ರಾಠೋಡ್, ಬಿಜೆಪಿ ಮುಖಂಡರಾದ ವೀರಾರೆಡ್ಡಿ ಪಾಟೀಲ, ಅಲ್ಲಮಪ್ರಭು ಹುಲಿ, ಜಗದೀಶಸಿಂಗ್ ಠಾಕೂರು, ವಿಶ್ವನಾಥ ಈದಲಾಯಿ, ಉದಯ ಸಿಂಧೋಲ, ರಾಕೇಶ ಗೋಸುಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>