‘ಬಳಿಕ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜಿಲ್ಲಾಮಟ್ಟದ ನಾಯಕರು, ಈ ಕ್ಷೇತ್ರದ ಚುನಾವಣಾ ಉಸ್ತುವಾರಿ ಎನ್.ರವಿಕುಮಾರ, ಕುಷ್ಠಗಿ ಶಾಸಕ ದೊಡ್ಡನಗೌಡ ಪಾಟೀಲ ಸೇರಿದಂತೆ ಹಲವರು ನನ್ನೊಂದಿಗೆ ಮಾತನಾಡಿದರು. ಆದರೆ, ನಾನು ಬೆಂಬಲಿಗರ ಬೆಂಬಲದಿಂದ ಸ್ಪರ್ಧಿಸಿದ್ದು, ಅವರನ್ನು ಕೇಳಿ ಅಭಿಪ್ರಾಯ ಹೇಳುವೆ ಎಂದೆ. ಅಂತಿಮವಾಗಿ ಬೆಂಗಳೂರಿನಲ್ಲಿ ಬಿ.ಎಸ್.ಯಡಿಯೂರಪ್ಪ, ಗೋವಿಂದ ಕಾರಜೋಳ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿದರು. ಹೀಗಾಗಿ ಸ್ಪರ್ಧೆಯಿಂದ ಹಿಂದೆ ಸರಿದೆ’ ಎಂದು ಮಾಹಿತಿ ನೀಡಿದರು.