<p><strong>ಕಲಬುರ್ಗಿ</strong>: ಕಲಬುರ್ಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಒಟ್ಟು 363 ಕೆರೆಗಳಿವೆ. ಇವುಗಳಲ್ಲಿ 2019ನೇ ಸಾಲಿನಲ್ಲಿ ಕಲಬುರ್ಗಿ ಜಿಲ್ಲೆಯಲ್ಲಿ 3 ಹಾಗೂ ಬೀದರ್ ಜಿಲ್ಲೆಯಲ್ಲಿ 17 ಕೆರೆಗಳನ್ನು ದುರಸ್ತಿ ಮಾಡಲಾಗಿದೆ ಎಂದು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.</p>.<p>ವಿಧಾನ ಪರಿಷತ್ ಸದಸ್ಯರ ಸುನೀಲ ವಲ್ಯಾಪುರೆ ಅವರು ಅಧಿವೇಶನದಲ್ಲಿ ಬುಧವಾರ ಕೇಳಿದ ಪ್ರಮುಖ ಪ್ರಶ್ನೆಗಳಿಗೆ ಅವರು ಗುರುವಾರ ಉತ್ತರ ನೀಡಿದರು.</p>.<p>ಕಲಬುರ್ಗಿ ಜಿಲ್ಲೆಯಲ್ಲಿ 166, ಯಾದಗಿರಿ– 72 ಹಾಗೂ ಬೀದರ್ನಲ್ಲಿ 125 ಕೆರೆಗಳು ಇವೆ. ಪ್ರತಿ ವರ್ಷ ಇಲಾಖೆಗೆ ಒದಗಿಸುವ ಅನುದಾನ ಬಳಸಿ ಅವಶ್ಯಕತೆ ಇದ್ದಲ್ಲಿ ದುರಸ್ತಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.</p>.<p>ನಬಾರ್ಡ್ ಕೆರೆಗಳ ಆಧುನೀಕರಣ ಯೋಜನೆ, ನಾನ್ ನಬಾರ್ಡ್ ಕೆರೆಗಳ ಆಧುನೀಕರಣ, ವಿಶೇಷ ಅಭಿವೃದ್ಧಿ ಯೋಜನೆ, ಕೆರೆಗಳ ಅಭಿವೃದ್ಧಿ– ನಾಡಿನ ಶ್ರೇಯೋಭಿವೃದ್ಧಿ ಹೀಗೆ ವಿವಿಧ ಯೋಜನೆಗಳು ಸೇರಿದಂತೆ ಮೂರೂ ಜಿಲ್ಲೆಗಳಿಗೆ ಈವರೆಗೆ ಒಟ್ಟು ₹ 5.15 ಕೋಟಿ ಅಂದಾಜು ಮಾಡಲಾಗಿತ್ತು. ಅದರಲ್ಲಿ ₹ 2.85 ಕೋಟಿಯನ್ನು ಈಗಾಗಲೇ ವೆಚ್ಚ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.</p>.<p>ಭೂ ಕಂದಾಯ, ಭೂ ಸುಧಾರಣೆ ಹಾಗೂ ಮಂಜೂರಾತಿಗೆ ಸಂಬಂಧಿಸಿದಂತೆ ಎಷ್ಟು ಪ್ರಕರಣಗಳು ಇತ್ಯರ್ಥವಾಗಿವೆ, ಎಷ್ಟು ಬಾಕಿ ಇವೆ ಎಂದೂ ಸುನೀಲ ವಲ್ಯಾಪುರೆ ಅವರು ಪ್ರಶ್ನೆ ಮಾಡಿದ್ದರು.</p>.<p>ಇದಕ್ಕೆ ಉತ್ತರಿಸಿದ ಕಂದಾಯ ಸಚಿವ ಆರ್. ಅಶೋಕ ಅವರು, ‘ಕಂದಾಯ ನ್ಯಾಯಾಲಯದಲ್ಲಿ ದಾಖಲಾದ ಪ್ರಕರಣಗಳನ್ನು ಆದ್ಯತೆ ಮೇರೆಗೆ ವಿಚಾರಣೆ ನಡೆಸಿ, ಇತ್ಯರ್ಥಪಡಿಸಲಾಗುತ್ತಿದೆ. ಪ್ರತಿ ವಾರ ಕನಿಷ್ಠ 2ರಿಂದ 3 ಬಾರಿ ನಿಯತಕಾಲಿಕವಾಗಿ ವಿಚಾರಣೆಯನ್ನು ನಿಗದಿಮಾಡಲಾಗುತ್ತಿದೆ. ತ್ವರಿತಗತಿಯಲ್ಲಿ ಪ್ರಕರಣಗಳನ್ನು ಇತ್ಯರ್ಥ ಮಾಡಲು ಕ್ರಮ ಕೈಗೊಳ್ಳಲಾಗಿದೆ’ ಎಂದು ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ</strong>: ಕಲಬುರ್ಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಒಟ್ಟು 363 ಕೆರೆಗಳಿವೆ. ಇವುಗಳಲ್ಲಿ 2019ನೇ ಸಾಲಿನಲ್ಲಿ ಕಲಬುರ್ಗಿ ಜಿಲ್ಲೆಯಲ್ಲಿ 3 ಹಾಗೂ ಬೀದರ್ ಜಿಲ್ಲೆಯಲ್ಲಿ 17 ಕೆರೆಗಳನ್ನು ದುರಸ್ತಿ ಮಾಡಲಾಗಿದೆ ಎಂದು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.</p>.<p>ವಿಧಾನ ಪರಿಷತ್ ಸದಸ್ಯರ ಸುನೀಲ ವಲ್ಯಾಪುರೆ ಅವರು ಅಧಿವೇಶನದಲ್ಲಿ ಬುಧವಾರ ಕೇಳಿದ ಪ್ರಮುಖ ಪ್ರಶ್ನೆಗಳಿಗೆ ಅವರು ಗುರುವಾರ ಉತ್ತರ ನೀಡಿದರು.</p>.<p>ಕಲಬುರ್ಗಿ ಜಿಲ್ಲೆಯಲ್ಲಿ 166, ಯಾದಗಿರಿ– 72 ಹಾಗೂ ಬೀದರ್ನಲ್ಲಿ 125 ಕೆರೆಗಳು ಇವೆ. ಪ್ರತಿ ವರ್ಷ ಇಲಾಖೆಗೆ ಒದಗಿಸುವ ಅನುದಾನ ಬಳಸಿ ಅವಶ್ಯಕತೆ ಇದ್ದಲ್ಲಿ ದುರಸ್ತಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.</p>.<p>ನಬಾರ್ಡ್ ಕೆರೆಗಳ ಆಧುನೀಕರಣ ಯೋಜನೆ, ನಾನ್ ನಬಾರ್ಡ್ ಕೆರೆಗಳ ಆಧುನೀಕರಣ, ವಿಶೇಷ ಅಭಿವೃದ್ಧಿ ಯೋಜನೆ, ಕೆರೆಗಳ ಅಭಿವೃದ್ಧಿ– ನಾಡಿನ ಶ್ರೇಯೋಭಿವೃದ್ಧಿ ಹೀಗೆ ವಿವಿಧ ಯೋಜನೆಗಳು ಸೇರಿದಂತೆ ಮೂರೂ ಜಿಲ್ಲೆಗಳಿಗೆ ಈವರೆಗೆ ಒಟ್ಟು ₹ 5.15 ಕೋಟಿ ಅಂದಾಜು ಮಾಡಲಾಗಿತ್ತು. ಅದರಲ್ಲಿ ₹ 2.85 ಕೋಟಿಯನ್ನು ಈಗಾಗಲೇ ವೆಚ್ಚ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.</p>.<p>ಭೂ ಕಂದಾಯ, ಭೂ ಸುಧಾರಣೆ ಹಾಗೂ ಮಂಜೂರಾತಿಗೆ ಸಂಬಂಧಿಸಿದಂತೆ ಎಷ್ಟು ಪ್ರಕರಣಗಳು ಇತ್ಯರ್ಥವಾಗಿವೆ, ಎಷ್ಟು ಬಾಕಿ ಇವೆ ಎಂದೂ ಸುನೀಲ ವಲ್ಯಾಪುರೆ ಅವರು ಪ್ರಶ್ನೆ ಮಾಡಿದ್ದರು.</p>.<p>ಇದಕ್ಕೆ ಉತ್ತರಿಸಿದ ಕಂದಾಯ ಸಚಿವ ಆರ್. ಅಶೋಕ ಅವರು, ‘ಕಂದಾಯ ನ್ಯಾಯಾಲಯದಲ್ಲಿ ದಾಖಲಾದ ಪ್ರಕರಣಗಳನ್ನು ಆದ್ಯತೆ ಮೇರೆಗೆ ವಿಚಾರಣೆ ನಡೆಸಿ, ಇತ್ಯರ್ಥಪಡಿಸಲಾಗುತ್ತಿದೆ. ಪ್ರತಿ ವಾರ ಕನಿಷ್ಠ 2ರಿಂದ 3 ಬಾರಿ ನಿಯತಕಾಲಿಕವಾಗಿ ವಿಚಾರಣೆಯನ್ನು ನಿಗದಿಮಾಡಲಾಗುತ್ತಿದೆ. ತ್ವರಿತಗತಿಯಲ್ಲಿ ಪ್ರಕರಣಗಳನ್ನು ಇತ್ಯರ್ಥ ಮಾಡಲು ಕ್ರಮ ಕೈಗೊಳ್ಳಲಾಗಿದೆ’ ಎಂದು ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>