<p><strong>ಚಿತ್ತಾಪುರ (ಕಲಬುರಗಿ ಜಿಲ್ಲೆ): </strong>ತಾಲ್ಲೂಕಿನ ದಂಡೋತಿ ಗ್ರಾಮದಲ್ಲಿ ಬುಧವಾರ ಸಂಜೆಯಿಂದ ಗುರುವಾರ ಬೆಳಗಿನವರೆಗೆ ಮಂಗವೊಂದು ದಾಳಿ ಮಾಡಿ ಹಲವರನ್ನು ಗಂಭೀರವಾಗಿ ಗಾಯಗೊಳಿಸಿದೆ.</p><p>ಗ್ರಾಮದ ನೀಲಮ್ಮ ದತ್ತು ಹೂಗಾರ, ಅಪ್ಪು ಪ್ರಕಾಶ ಕೋಡ್ಲಿ, ಮಹ್ಮದ್ ಫಾರೂಕ್ ಗೌಸ್ ಪಟೇಲ್ ಹೊನ್ನಳ್ಳಿ ಅವರ ಮೇಲೆ ಮಂಗವು ಏಕಾಏಕಿ ದಾಳಿ ಮಾಡಿ ಕಾಲಿನ ಮಾಂಸಖಂಡ ಕಿತ್ತು ಬರುವಂತೆ ಕಚ್ಚಿದೆ.</p><p>ಮಂಗನ ದಾಳಿಯಿಂದ ಗಾಯಗೊಂಡಿರುವವರನ್ನು ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. </p><p>'ಮಂಗಕ್ಕೆ ಹುಚ್ಚು ಹಿಡಿದಂತಿದೆ. ಹೀಗಾಗಿ ದಾಳಿ ಮಾಡಿ ಕಚ್ಚುತ್ತಿದೆ. ಗ್ರಾಮಸ್ಥರು ಬಡಿಗೆ ಹಿಡಿದು ಮಂಗವನ್ನು ಬೆನ್ನಟ್ಟಿದಾಗ ಅಡವಿಯತ್ತ ಹೋಗಿ ಪುನಃ ಗ್ರಾಮದಲ್ಲಿನ ಮಂಗಗಳ ಗುಂಪಿಗೆ ಬಂದು ಸೇರಿಕೊಳ್ಳುತ್ತಿದೆ. ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ' ಎಂದು ಗ್ರಾಮಸ್ಥರು 'ಪ್ರಜಾವಾಣಿ'ಗೆ ತಿಳಿಸಿದ್ದಾರೆ.</p><p>'ಅರಣ್ಯ ಇಲಾಖೆಯ ಸಿಬ್ಬಂದಿ ಗ್ರಾಮಕ್ಕೆ ಬಂದು ಜನರ ದಾಳಿ ಮಾಡುತ್ತಿರುವ ಮಂಗವನ್ನು ಕೂಡಲೇ ಸೆರೆ ಹಿಡಿದು ಸ್ಥಳಾಂತರಿಸಬೇಕು' ಎಂದು ಗ್ರಾಮದ ಈರಣ್ಣಾ ಕೋಳಕೂರ, ಜಗನ್ನಾಥ, ಮೈನೋದ್ದಿನ್ ತೊನಸನಳ್ಳಿ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ತಾಪುರ (ಕಲಬುರಗಿ ಜಿಲ್ಲೆ): </strong>ತಾಲ್ಲೂಕಿನ ದಂಡೋತಿ ಗ್ರಾಮದಲ್ಲಿ ಬುಧವಾರ ಸಂಜೆಯಿಂದ ಗುರುವಾರ ಬೆಳಗಿನವರೆಗೆ ಮಂಗವೊಂದು ದಾಳಿ ಮಾಡಿ ಹಲವರನ್ನು ಗಂಭೀರವಾಗಿ ಗಾಯಗೊಳಿಸಿದೆ.</p><p>ಗ್ರಾಮದ ನೀಲಮ್ಮ ದತ್ತು ಹೂಗಾರ, ಅಪ್ಪು ಪ್ರಕಾಶ ಕೋಡ್ಲಿ, ಮಹ್ಮದ್ ಫಾರೂಕ್ ಗೌಸ್ ಪಟೇಲ್ ಹೊನ್ನಳ್ಳಿ ಅವರ ಮೇಲೆ ಮಂಗವು ಏಕಾಏಕಿ ದಾಳಿ ಮಾಡಿ ಕಾಲಿನ ಮಾಂಸಖಂಡ ಕಿತ್ತು ಬರುವಂತೆ ಕಚ್ಚಿದೆ.</p><p>ಮಂಗನ ದಾಳಿಯಿಂದ ಗಾಯಗೊಂಡಿರುವವರನ್ನು ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. </p><p>'ಮಂಗಕ್ಕೆ ಹುಚ್ಚು ಹಿಡಿದಂತಿದೆ. ಹೀಗಾಗಿ ದಾಳಿ ಮಾಡಿ ಕಚ್ಚುತ್ತಿದೆ. ಗ್ರಾಮಸ್ಥರು ಬಡಿಗೆ ಹಿಡಿದು ಮಂಗವನ್ನು ಬೆನ್ನಟ್ಟಿದಾಗ ಅಡವಿಯತ್ತ ಹೋಗಿ ಪುನಃ ಗ್ರಾಮದಲ್ಲಿನ ಮಂಗಗಳ ಗುಂಪಿಗೆ ಬಂದು ಸೇರಿಕೊಳ್ಳುತ್ತಿದೆ. ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ' ಎಂದು ಗ್ರಾಮಸ್ಥರು 'ಪ್ರಜಾವಾಣಿ'ಗೆ ತಿಳಿಸಿದ್ದಾರೆ.</p><p>'ಅರಣ್ಯ ಇಲಾಖೆಯ ಸಿಬ್ಬಂದಿ ಗ್ರಾಮಕ್ಕೆ ಬಂದು ಜನರ ದಾಳಿ ಮಾಡುತ್ತಿರುವ ಮಂಗವನ್ನು ಕೂಡಲೇ ಸೆರೆ ಹಿಡಿದು ಸ್ಥಳಾಂತರಿಸಬೇಕು' ಎಂದು ಗ್ರಾಮದ ಈರಣ್ಣಾ ಕೋಳಕೂರ, ಜಗನ್ನಾಥ, ಮೈನೋದ್ದಿನ್ ತೊನಸನಳ್ಳಿ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>