ನದಿ ತೀರದ ಗ್ರಾಮಗಳಿಗೆ ಪ್ರವಾಹದಿಂದ ತೊಂದರೆ ಉಂಟಾಗಬಹುದು. ಸಾರ್ವಜನಿಕರು ಈಜಲು, ಬಟ್ಟೆ ತೊಳೆಯಲು, ಜಾನುವಾರುಗಳಿಗೆ ನೀರು ಕುಡಿಸಲು ಸೇರಿದಂತೆ ಬೇರೆ ಯಾವುದೇ ಕಾರಣಕ್ಕೂ ನದಿಗೆ ಇಳಿಯಬಾರದು. ರೈತರು, ಸಾರ್ವಜನಿಕರು, ಸಣ್ಣ ನೀರಾವರಿ ಇಲಾಖೆ, ನೀರು ಸರಬರಾಜಿಗೆ ಸಂಬಂಧಿಸಿದ ಆಸ್ತಿಗಳಿದ್ದಲ್ಲಿ ಸುರಕ್ಷಿತ ಸ್ಥಳಗಳಿಗೆ ಒಯ್ಯಬೇಕು. ಮುಂಜಾಗ್ರತೆ ವಹಿಸಬೇಕು ಎಂದು ಸಹಾಯಕ ಇಂಜಿನಿಯರ್ ವೀರೇಶ್ ಜೀರ್ಗೆ ತಿಳಿಸಿದ್ದಾರೆ.