ಪಟ್ಟಣದಲ್ಲಿ ಪರಿಸರ ಮಾಲಿನ್ಯ ಹೆಚ್ಚಾಗುತ್ತಿದೆ. ಕೆಲವರು ತಮ್ಮ ವಾಹನಗಳನ್ನು ಸುಸ್ಥಿತಿಯಲ್ಲಿ ಇಡದೇ ಇರುವುದರಿಂದ ದಟ್ಟವಾದ ಹೊಗೆ ಉಗುಳುತ್ತಾ ಸಾರ್ವಜನಿಕರ ಗೋಳಾಟಕ್ಕೆ ಕಾರಣರಾಗಿದ್ದಾರೆ. ಎಸಿಸಿ ಕಂಪನಿಯ ದೂಳಿನಿಂದ ಕಂಗೆಟ್ಟಿರುವ ಸಾರ್ವಜನಿಕರಿಗೆ ವಾಹನಗಳ ಇಂಗಾಲಯುಕ್ತ ಹೊಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಇದಕ್ಕೆ ಅಂಕುಶ ಹಾಕಬೇಕಿರುವ ಮಾಲಿನ್ಯ ನಿಯಂತ್ರಣ ಮಂಡಳಿ, ಸಾರಿಗೆ ಮತ್ತು ಪರಿಸರ ಇಲಾಖೆ ಅಧಿಕಾರಿಗಳು ಇತ್ತ ತಲೆ ಹಾಕುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.