ಮಂಗಳವಾರವಷ್ಟೇ ನಸುಕಿನ ಜಾವ ಮಾದನ ಹಿಪ್ಪರಗಿ ಗ್ರಾಮಕ್ಕೆ ಬಂದಿದ್ದರು ಎಂದು ಹೇಳಲಾಗುತ್ತಿದೆ.
ರೇವಪ್ಪ ದುದಗಿ ಈಗಾಗಲೇ ಮಾದನ ಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಲ್ಲಿ, ಗ್ರಾಮದ ಸಿದ್ದರಾಮ ಗಿದನಿ ಅವರು ಆಸ್ತಿ ಖರೀದಿಸಿ ಪೂರ್ಣ ಹಣ ನೀಡದೆ ಜಮೀನು ನೋಂದಣಿ ಮಾಡಿಕೊಂಡಿರುವ ಕುರಿತು ತಕರಾರು ನಡೆದು, ನನ್ನ ಹೆಂಡತಿ ಮತ್ತು ಮೂವರು ಮಕ್ಕಳನ್ನು ಕೊಲೆ ಮಾಡಿ ಬಾವಿಗೆ ಹಾಕಿದ್ದಾನೆ ಎಂದು ದೂರು ಸಲ್ಲಿಸಿದ್ದಾರೆ. ಈಗಾಗಲೇ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ಆರಂಭಿಸಿದ್ದಾರೆ.