<p><strong>ಕಲಬುರ್ಗಿ: </strong>ಜಿಲ್ಲೆಯ ಅಫಜಲಪುರ ತಾಲ್ಲೂಕಿನ ನೀಲೂರು ಗ್ರಾಮದ ಹತ್ತಿರ ರೈಲ್ವೆ ಡಬ್ಲಿಂಗ್ ಕಾಮಗಾರಿ ಕೈಗೆತ್ತಿಕೊಂಡಿದ್ದು, ಇದಕ್ಕೆ ಅಗತ್ಯವಿರುವ ₹ 4 ಕೋಟಿಯನ್ನು ಆದಷ್ಟು ಬೇಗ ಬಿಡುಗಡೆ ಮಾಡಬೇಕು ಎಂದು ಸಂಸದ ಡಾ.ಉಮೇಶ ಜಾಧವ ಅವರು ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ ಅವರಿಗೆ ಮನವಿ ಮಾಡಿದರು.</p>.<p>ಮಂಗಳವಾರ ಬೆಂಗಳೂರಿನಲ್ಲಿ ಭೇಟಿ ಮಾಡಿದ ಸಂಸದರು, ನೀಲೂರು ಗ್ರಾಮದಲ್ಲಿ ಮೈಬೂಬ್ ಸುಬಾನಿ ದರ್ಗಾ ಇದ್ದು, ವರ್ಷದಲ್ಲಿ ಎರಡು ಬಾರಿ ಉರುಸ್ ನಡೆಯುತ್ತದೆ. ಈ ಉತ್ಸವಕ್ಕೆ ನೆರೆಯ ಮಹಾರಾಷ್ಟ್ರ, ಆಂಧ್ರ ಹಾಗೂ ತೆಲಂಗಾಣ ರಾಜ್ಯಗಳಿಂದಲೂ ಅಪಾರ ಭಕ್ತರು ಬರುತ್ತಾರೆ. ಜತೆಗೆ, ಈ ಗ್ರಾಮದ ಸುತ್ತಲಿನ ರೈತರು ಕಬ್ಬು, ಬಾಳೆ ಬೆಳೆಯುತ್ತಾರೆ. ಅವರ ಉತ್ಪನ್ನ ಸಾಗಿಸುವುದಕ್ಕೂ ಮಾರ್ಗದ ಅವಶ್ಯಕತೆ ಇದೆ ಎಂದು ಮನವರಿಕೆ ಮಾಡಿದರು.</p>.<p>ಪ್ರತಿ ದಿನ ಓಡಾಡಲು ಈ ಭಾಗದ ಜನರಿಗೆ ತೊಂದರೆ ಆಗುತ್ತಿದ್ದು, ರೈಲ್ವೆ ಡಬ್ಲಿಂಗ್ ಕಾಮಗಾರಿಯನ್ನು ಆದಷ್ಟು ಬೇಗ ಮುಗಿಸಬೇಕಿದೆ. ಈ ಸಂಗತಿಯನ್ನು ರಾಜ್ಯ ಸರ್ಕಾರಕ್ಕೆ ಮನವರಿಕೆ ಮಾಡಿ, ಕೂಡಲೇ ಅನುದಾನ ಬಿಡುಗಡೆ ಮಾಡಬೇಕು ಎಂದೂ ಸಂಸದರು ತಿಳಿಸಿದರು.</p>.<p>ಈ ಸಂದರ್ಭ ಸೊಲ್ಲಾಪುರ ರೈಲ್ವೆ ವಿಭಾಗದ ಕಾರ್ಯನಿರ್ವಾಹಕ ಅಧಿಕಾರಿ ರವೀಂದ್ರ ಸಿಂಗಾಲ್, ಬಿಜೆಪಿ ಮುಖಂಡ ವಿಠಲ ಜಾಧವ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ಜಿಲ್ಲೆಯ ಅಫಜಲಪುರ ತಾಲ್ಲೂಕಿನ ನೀಲೂರು ಗ್ರಾಮದ ಹತ್ತಿರ ರೈಲ್ವೆ ಡಬ್ಲಿಂಗ್ ಕಾಮಗಾರಿ ಕೈಗೆತ್ತಿಕೊಂಡಿದ್ದು, ಇದಕ್ಕೆ ಅಗತ್ಯವಿರುವ ₹ 4 ಕೋಟಿಯನ್ನು ಆದಷ್ಟು ಬೇಗ ಬಿಡುಗಡೆ ಮಾಡಬೇಕು ಎಂದು ಸಂಸದ ಡಾ.ಉಮೇಶ ಜಾಧವ ಅವರು ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ ಅವರಿಗೆ ಮನವಿ ಮಾಡಿದರು.</p>.<p>ಮಂಗಳವಾರ ಬೆಂಗಳೂರಿನಲ್ಲಿ ಭೇಟಿ ಮಾಡಿದ ಸಂಸದರು, ನೀಲೂರು ಗ್ರಾಮದಲ್ಲಿ ಮೈಬೂಬ್ ಸುಬಾನಿ ದರ್ಗಾ ಇದ್ದು, ವರ್ಷದಲ್ಲಿ ಎರಡು ಬಾರಿ ಉರುಸ್ ನಡೆಯುತ್ತದೆ. ಈ ಉತ್ಸವಕ್ಕೆ ನೆರೆಯ ಮಹಾರಾಷ್ಟ್ರ, ಆಂಧ್ರ ಹಾಗೂ ತೆಲಂಗಾಣ ರಾಜ್ಯಗಳಿಂದಲೂ ಅಪಾರ ಭಕ್ತರು ಬರುತ್ತಾರೆ. ಜತೆಗೆ, ಈ ಗ್ರಾಮದ ಸುತ್ತಲಿನ ರೈತರು ಕಬ್ಬು, ಬಾಳೆ ಬೆಳೆಯುತ್ತಾರೆ. ಅವರ ಉತ್ಪನ್ನ ಸಾಗಿಸುವುದಕ್ಕೂ ಮಾರ್ಗದ ಅವಶ್ಯಕತೆ ಇದೆ ಎಂದು ಮನವರಿಕೆ ಮಾಡಿದರು.</p>.<p>ಪ್ರತಿ ದಿನ ಓಡಾಡಲು ಈ ಭಾಗದ ಜನರಿಗೆ ತೊಂದರೆ ಆಗುತ್ತಿದ್ದು, ರೈಲ್ವೆ ಡಬ್ಲಿಂಗ್ ಕಾಮಗಾರಿಯನ್ನು ಆದಷ್ಟು ಬೇಗ ಮುಗಿಸಬೇಕಿದೆ. ಈ ಸಂಗತಿಯನ್ನು ರಾಜ್ಯ ಸರ್ಕಾರಕ್ಕೆ ಮನವರಿಕೆ ಮಾಡಿ, ಕೂಡಲೇ ಅನುದಾನ ಬಿಡುಗಡೆ ಮಾಡಬೇಕು ಎಂದೂ ಸಂಸದರು ತಿಳಿಸಿದರು.</p>.<p>ಈ ಸಂದರ್ಭ ಸೊಲ್ಲಾಪುರ ರೈಲ್ವೆ ವಿಭಾಗದ ಕಾರ್ಯನಿರ್ವಾಹಕ ಅಧಿಕಾರಿ ರವೀಂದ್ರ ಸಿಂಗಾಲ್, ಬಿಜೆಪಿ ಮುಖಂಡ ವಿಠಲ ಜಾಧವ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>