ರುಮ್ಮನಗೂಡ ಗ್ರಾಮದ ರಸ್ತೆಯ ಕಾಮಗಾರಿ ಕಳಪೆಯಾಗಿದ್ದು, ಈಗ ಸುರಿದ ಮಳೆಗೆ ಕೆಸರು ಗದ್ದೆಯಂತೆ ಬದಲಾಗಿದೆ. ವರ್ಷದಿಂದ ರಸ್ತೆಯಲ್ಲಿ ತಗ್ಗು–ಗುಂಡಿಗಳು ಬಿದ್ದಿವೆ. ಬಿದ್ದ ಅಲ್ಪ ಮಳೆಗೆ ರಸ್ತೆಯೆಲ್ಲ ಕೆಸರು ಮಯವಾಗುತ್ತದೆ. ಇದರಿಂದ ವಾಹನ ಹಾಗೂ ಸಾರ್ವಜನಿಕರ ಓಡಾಟಕ್ಕೆ ತೊಂದರೆ ಆಗುತ್ತಿದೆ. ಈ ಬಗ್ಗೆ ಜನಪ್ರತಿನಿಧಿ ಹಾಗೂ ಅಧಿಕಾರಿಗಳ ಗಮನಕ್ಕೆ ತಂದರೂ ಸ್ಪಂದಿಸಿಲ್ಲ ಎಂದು ಗ್ರಾಮಸ್ಥ ಮಶಾಖ ಮಡಕಿ ದೂರಿದರು.