<p><strong>ಜೇವರ್ಗಿ:</strong> ಪಟ್ಟಣದ ದತ್ತನಗರ ಬಡಾವಣೆಯಲ್ಲಿರುವ ಮೂರು ವಸತಿ ನಿಲಯಗಳಿಗೆ ತೆರಳುವ ರಸ್ತೆ ಸತತ ಮಳೆಯಿಂದ ಕೆಸರು ಗದ್ದೆಯಂತಾಗಿದ್ದು, ವಿದ್ಯಾರ್ಥಿಗಳು ಪರದಾಡುವಂತಾಗಿದೆ.</p>.<p>ವಿಜಯಪುರ ರಸ್ತೆಯ ದತ್ತನಗರ ಬಡಾವಣೆಯಲ್ಲಿನ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಹಾಗೂ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಗಳಿದೆ.</p>.<p>ಇಲ್ಲಿನ ವಸತಿ ನಿಲಯಗಳಲ್ಲಿ ಸರಿ ಸುಮಾರು 450ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಮಳೆನೀರು ರಸ್ತೆ ಮೇಲೆಯೇ ನಿಲ್ಲುವುದರಿಂದ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ವಿದ್ಯಾರ್ಥಿಗಳು ಕಾಲೇಜಿಗೆ ತೆರಳಲು ಮಳೆಗಾಲದಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರೆ. </p>.<p>ವಸತಿ ನಿಲಯಗಳಿಗೆ ಹೋಗಲು ಯಾವುದೇ ರೀತಿಯ ಸೌಕರ್ಯವಿಲ್ಲ. ಅಟೋಗಳು ಕೂಡಾ ಓಡಾಡುತ್ತಿಲ್ಲ. ಈ ರಸ್ತೆಯಲ್ಲಿ ದ್ವಿಚಕ್ರವಾಹನ ಕೂಡ ಹೋಗಲು ಸಾಧ್ಯವಿಲ್ಲದಂತಾಗಿದೆ. ವಿದ್ಯಾರ್ಥಿಗಳು ನಡೆದುಕೊಂಡೇ ಹೋಗಬೇಕು. ಮಳೆಗಾಲ ಮುಗಿಯುವವರೆಗೆ ವಿದ್ಯಾರ್ಥಿಗಳ ಗೋಳು ಹೇಳತೀರದಾಗಿದೆ.</p>.<p>ವಸತಿನಿಲಯಗಳಿಗೆ ಅಗತ್ಯವಾದ ವಸ್ತುಗಳು, ದಿನಸಿ, ಗ್ಯಾಸ್ ಸಿಲಿಂಡರ್ ಸಾಗಿಸಲು ಹರಸಾಹಸ ಪಡುವಂತಾಗಿದೆ. ಹೆದ್ದಾರಿಯಿಂದ ವಸತಿ ನಿಲಯದವರೆಗೆ ಹೊತ್ತುಕೊಂಡು ಹೋಗುವಂತಾಗಿದೆ.</p>.<p>ಹಲವು ವರ್ಷಗಳಿಂದ ಇದೇ ದುಸ್ಥಿತಿ ಇದೆ. ಈ ಬಗ್ಗೆ ಕಳೆದ ನಾಲ್ಕಾರು ವರ್ಷಗಳಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ ವಿದ್ಯಾರ್ಥಿಗಳು ಮನವಿ ಮಾಡುತ್ತಾ ಬಂದಿದ್ದಾರೆ. ಆದರೂ ಈವರೆಗೆ ಯಾವುದೇ ಕ್ರಮ ಜರುಗಿಸಿಲ್ಲ. ಪುರಸಭೆ ರಸ್ತೆ ನಿರ್ಮಾಣದ ಗೋಜಿಗೆ ಹೋಗಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದೆ.</p>.<p>ಸಂಬಂಧಿಸಿದ ಇಲಾಖೆ ಶೀಘ್ರ ರಸ್ತೆಗೆ ತಾತ್ಕಾಲಿಕ ಮುರುಮ್ ಹಾಕಿಸಿ ಅನುಕೂಲ ಮಾಡಬೇಕು ಎಂದು ಪೋಷಕರು <br>ಒತ್ತಾಯಿಸಿದ್ದಾರೆ.</p>.<blockquote>ಮೂರು ವಸತಿನಿಲಯ ವಿದ್ಯಾರ್ಥಿಗಳಿಗೆ ತೊಂದರೆ | ಕಾಲೇಜಿಗೆ ತೆರಳಲು ನರಕಯಾತನೆ | ರಸ್ತೆ ದುರಸ್ತಿಗೆ ಪೋಷಕರ ಒತ್ತಾಯ</blockquote>.<div><blockquote>ವಸತಿ ಶಾಲೆಯಲ್ಲಿ ಬಡ ಮಕ್ಕಳಿದ್ದಾರೆ. ಇಲ್ಲಿನ ಮಕ್ಕಳ ಕಷ್ಟ ರಾಜಕಾರಣಿಗಳಿಗೆ ಅಧಿಕಾರಿಗಳಿಗೆ ಅರ್ಥವಾಗುತ್ತಿಲ್ಲ. ಕೂಡಲೇ ರಸ್ತೆ ನಿರ್ಮಾಣ ಮಾಡಿ ಅನುಕೂಲ ಕಲ್ಪಿಸಬೇಕು</blockquote><span class="attribution">ಸಿದ್ದು ಕಲ್ಲೂರ ಸ್ಥಳೀಯ ನಿವಾಸಿ</span></div>.<div><blockquote>ರಸ್ತೆಗೆ ಮುರುಮ್ ಹಾಕಿಸಿ ಸಂಚಾರ ಮಾಡಲು ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು</blockquote><span class="attribution">ಶಂಭುಲಿಂಗ ದೇಸಾಯಿ, ಪುರಸಭೆ ಮುಖ್ಯಾಧಿಕಾರಿ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೇವರ್ಗಿ:</strong> ಪಟ್ಟಣದ ದತ್ತನಗರ ಬಡಾವಣೆಯಲ್ಲಿರುವ ಮೂರು ವಸತಿ ನಿಲಯಗಳಿಗೆ ತೆರಳುವ ರಸ್ತೆ ಸತತ ಮಳೆಯಿಂದ ಕೆಸರು ಗದ್ದೆಯಂತಾಗಿದ್ದು, ವಿದ್ಯಾರ್ಥಿಗಳು ಪರದಾಡುವಂತಾಗಿದೆ.</p>.<p>ವಿಜಯಪುರ ರಸ್ತೆಯ ದತ್ತನಗರ ಬಡಾವಣೆಯಲ್ಲಿನ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಹಾಗೂ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಗಳಿದೆ.</p>.<p>ಇಲ್ಲಿನ ವಸತಿ ನಿಲಯಗಳಲ್ಲಿ ಸರಿ ಸುಮಾರು 450ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಮಳೆನೀರು ರಸ್ತೆ ಮೇಲೆಯೇ ನಿಲ್ಲುವುದರಿಂದ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ವಿದ್ಯಾರ್ಥಿಗಳು ಕಾಲೇಜಿಗೆ ತೆರಳಲು ಮಳೆಗಾಲದಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರೆ. </p>.<p>ವಸತಿ ನಿಲಯಗಳಿಗೆ ಹೋಗಲು ಯಾವುದೇ ರೀತಿಯ ಸೌಕರ್ಯವಿಲ್ಲ. ಅಟೋಗಳು ಕೂಡಾ ಓಡಾಡುತ್ತಿಲ್ಲ. ಈ ರಸ್ತೆಯಲ್ಲಿ ದ್ವಿಚಕ್ರವಾಹನ ಕೂಡ ಹೋಗಲು ಸಾಧ್ಯವಿಲ್ಲದಂತಾಗಿದೆ. ವಿದ್ಯಾರ್ಥಿಗಳು ನಡೆದುಕೊಂಡೇ ಹೋಗಬೇಕು. ಮಳೆಗಾಲ ಮುಗಿಯುವವರೆಗೆ ವಿದ್ಯಾರ್ಥಿಗಳ ಗೋಳು ಹೇಳತೀರದಾಗಿದೆ.</p>.<p>ವಸತಿನಿಲಯಗಳಿಗೆ ಅಗತ್ಯವಾದ ವಸ್ತುಗಳು, ದಿನಸಿ, ಗ್ಯಾಸ್ ಸಿಲಿಂಡರ್ ಸಾಗಿಸಲು ಹರಸಾಹಸ ಪಡುವಂತಾಗಿದೆ. ಹೆದ್ದಾರಿಯಿಂದ ವಸತಿ ನಿಲಯದವರೆಗೆ ಹೊತ್ತುಕೊಂಡು ಹೋಗುವಂತಾಗಿದೆ.</p>.<p>ಹಲವು ವರ್ಷಗಳಿಂದ ಇದೇ ದುಸ್ಥಿತಿ ಇದೆ. ಈ ಬಗ್ಗೆ ಕಳೆದ ನಾಲ್ಕಾರು ವರ್ಷಗಳಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ ವಿದ್ಯಾರ್ಥಿಗಳು ಮನವಿ ಮಾಡುತ್ತಾ ಬಂದಿದ್ದಾರೆ. ಆದರೂ ಈವರೆಗೆ ಯಾವುದೇ ಕ್ರಮ ಜರುಗಿಸಿಲ್ಲ. ಪುರಸಭೆ ರಸ್ತೆ ನಿರ್ಮಾಣದ ಗೋಜಿಗೆ ಹೋಗಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದೆ.</p>.<p>ಸಂಬಂಧಿಸಿದ ಇಲಾಖೆ ಶೀಘ್ರ ರಸ್ತೆಗೆ ತಾತ್ಕಾಲಿಕ ಮುರುಮ್ ಹಾಕಿಸಿ ಅನುಕೂಲ ಮಾಡಬೇಕು ಎಂದು ಪೋಷಕರು <br>ಒತ್ತಾಯಿಸಿದ್ದಾರೆ.</p>.<blockquote>ಮೂರು ವಸತಿನಿಲಯ ವಿದ್ಯಾರ್ಥಿಗಳಿಗೆ ತೊಂದರೆ | ಕಾಲೇಜಿಗೆ ತೆರಳಲು ನರಕಯಾತನೆ | ರಸ್ತೆ ದುರಸ್ತಿಗೆ ಪೋಷಕರ ಒತ್ತಾಯ</blockquote>.<div><blockquote>ವಸತಿ ಶಾಲೆಯಲ್ಲಿ ಬಡ ಮಕ್ಕಳಿದ್ದಾರೆ. ಇಲ್ಲಿನ ಮಕ್ಕಳ ಕಷ್ಟ ರಾಜಕಾರಣಿಗಳಿಗೆ ಅಧಿಕಾರಿಗಳಿಗೆ ಅರ್ಥವಾಗುತ್ತಿಲ್ಲ. ಕೂಡಲೇ ರಸ್ತೆ ನಿರ್ಮಾಣ ಮಾಡಿ ಅನುಕೂಲ ಕಲ್ಪಿಸಬೇಕು</blockquote><span class="attribution">ಸಿದ್ದು ಕಲ್ಲೂರ ಸ್ಥಳೀಯ ನಿವಾಸಿ</span></div>.<div><blockquote>ರಸ್ತೆಗೆ ಮುರುಮ್ ಹಾಕಿಸಿ ಸಂಚಾರ ಮಾಡಲು ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು</blockquote><span class="attribution">ಶಂಭುಲಿಂಗ ದೇಸಾಯಿ, ಪುರಸಭೆ ಮುಖ್ಯಾಧಿಕಾರಿ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>