ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಷುಲ್ಲಕ ಕಾರಣ: ಮಾರಕಾಸ್ತ್ರಗಳಿಂದ ಹೊಡೆದು ಸ್ನೇಹಿತನ ಕೊಲೆ

Last Updated 20 ಸೆಪ್ಟೆಂಬರ್ 2019, 5:54 IST
ಅಕ್ಷರ ಗಾತ್ರ

ಕಲಬುರ್ಗಿ: ಇಲ್ಲಿನ ಖರ್ಗೆ ಕಾಲೊನಿಯಲ್ಲಿ ಬುಧವಾರ ತಡರಾತ್ರಿ ಹಣಕಾಸಿನ ವಿಷಯಕ್ಕೆ ಮೂವರು ಸ್ನೇಹಿತರ ಮಧ್ಯೆ ಆರಂಭವಾದ ಜಗಳ, ಒಬ್ಬನ ಕೊಲೆಯಲ್ಲಿ ಅಂತ್ಯವಾಗಿದೆ.

ಪ್ರಶಾಂತ್ ಕೋಟಗಿ (35) ಕೊಲೆಯಾದ ಯುವಕ. ಈತನ ಸ್ನೇಹಿತರೇ ಆದ ಮಹೇಶ ಹಾಗೂ ವಿನೋದ ಆರೋಪಿಗಳು.

ಮೂವರೂ ಸೇರಿಕೊಂಡು ಆಗಾಗ ಪಾರ್ಟಿ ಮಾಡುತ್ತಿದ್ದರು. ಇದಕ್ಕಾಗಿ ಹಣ ಹೊಂದಿಸಿಕೊಳ್ಳುತ್ತಿದ್ದರು. ಇದೇ ರೀತಿ ಹಣ ಹೊಂದಿಸಿ ಬುಧವಾರ ರಾತ್ರಿ ಕೂಡ ಖರ್ಗೆ ಕಾಲೊನಿಯ ಅಫಜಲಪುರ ರಸ್ತೆಯಲ್ಲಿರುವ ಕಟ್ಟಡವೊಂದರಲ್ಲಿ ಪಾರ್ಟಿ ಮಾಡಲು ಸೇರಿದ್ದರು.

ಹಣ ಸೇರಿಸುವ ವಿಚಾರವಾಗಿ ಪ್ರಶಾಂತ್‌ ವಿರುದ್ಧ ಉಳಿದಿಬ್ಬರು ಜಗಳ ತೆಗೆದಿದ್ದಾರೆ. ಇದು ಅತಿರೇಕಕ್ಕೆ ಹೋಗಿ ಮಾರಕಾಸ್ತ್ರಗಳಿಂದ ಹೊಡೆದಿದ್ದಾರೆ. ಪ್ರಶಾಂತ್‌ ಸತ್ತಿದ್ದನ್ನು ಖಚಿತ ಮಾಡಿಕೊಂಡ ಮೇಲೆ ಇಬ್ಬರೂ ಆರೋಪಿಗಳು ಪರಾರಿಯಾದರು. ಬೆಳಿಗ್ಗೆ ಜನರು ನೋಡಿದ ಮೇಲೆಯೇ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ.

ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT