ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮಖಂಡಿ: ಕಲ್ಲಿನಿಂದ ಜಜ್ಜಿ ಅಣ್ಣನಿಂದ ತಮ್ಮನ ಕೊಲೆ

ಯಡ್ರಾಮಿ: ತಾಲ್ಲೂಕಿನ ಜಮಖಂಡಿ ಗ್ರಾಮದಲ್ಲಿ ಅಣ್ಣನಿಂದ ತಮ್ಮನ ಕೊಲೆ
Last Updated 8 ಜುಲೈ 2020, 15:36 IST
ಅಕ್ಷರ ಗಾತ್ರ

ಯಡ್ರಾಮಿ (ಕಲಬುರ್ಗಿ ಜಿಲ್ಲೆ): ತಾಲ್ಲೂಕಿನ ಜಮಖಂಡಿ ಗ್ರಾಮದಲ್ಲಿ ಆಸ್ತಿ ಮಾರಾಟ ಮಾಡಿದ ಹಣವನ್ನು ಹಂಚಿಕೊಳ್ಳುವ ವಿಚಾರವಾಗಿ ಅಣ್ಣನೇ ತಮ್ಮನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ.

ವಿಶ್ವರಾಧ್ಯ ತಂದೆ ಭೀಮರಾಯ ಯಾಳಗಿ (30) ಕೊಲೆಯಾದ ವ್ಯಕ್ತಿ. ಜಮೀನು ಮಾರಾಟ ಮಾಡಿದ ಹಣವನ್ನು ಹಂಚಿಕೆ ಮಾಡಿಕೊಳ್ಳುವ ವಿಚಾರವಾಗಿ ಇಬ್ಬರಿಗೂ ಜಗಳವಾಗಿತ್ತು. ಇದೇ ವಿಚಾರವನ್ನು ಇಟ್ಟುಕೊಂಡು ಇತನ ಅಣ್ಣ ಮತ್ತಪ್ಪ ತಂದೆ ಭೀಮರಾಯ ಯಾಳಗಿ ಎಂಬಾತ ಕೊಲೆ ಮಾಡಿದ್ದಾನೆ.

ಆಸ್ತಿ ಮಾರಾಟ ಮಾಡಿದ ಹಣ ಕೊಡಬೇಕು ಎಂದು ವಿಶ್ವರಾಧ್ಯ ಹಠ ಹಿಡಿದಿದ್ದರಿಂದ ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಮೃತನ ಅಣ್ಣ ಮದ್ಯವ್ಯಸನಿಯಾಗಿದ್ದು, ಕುಡಿದ ಅಮಲಿನಲ್ಲಿ ವಿಶ್ವರಾಧ್ಯನ ಮನೆಗೆ ಹೋಗಿ ಕೊಲೆ ಮಾಡಿರಬಹುದು ಎನ್ನಲಾಗಿದೆ. ಆರೋಪಿಯನ್ನು ಕಲಬುರ್ಗಿ ಬಸ್ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಸ್ಥಳಕ್ಕೆ ಸರ್ಕಲ್ ಪೊಲೀಸ್‌ ಇನ್‌ಸ್ಪೆಕ್ಟರ್‌ ರಮೇಶ ರೊಟ್ಟಿ, ಪಿಎಸ್‍ಐ ಗಜಾನಂದ ಬಿರಾದಾರ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT