ಆಸ್ತಿ ಮಾರಾಟ ಮಾಡಿದ ಹಣ ಕೊಡಬೇಕು ಎಂದು ವಿಶ್ವರಾಧ್ಯ ಹಠ ಹಿಡಿದಿದ್ದರಿಂದ ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಮೃತನ ಅಣ್ಣ ಮದ್ಯವ್ಯಸನಿಯಾಗಿದ್ದು, ಕುಡಿದ ಅಮಲಿನಲ್ಲಿ ವಿಶ್ವರಾಧ್ಯನ ಮನೆಗೆ ಹೋಗಿ ಕೊಲೆ ಮಾಡಿರಬಹುದು ಎನ್ನಲಾಗಿದೆ. ಆರೋಪಿಯನ್ನು ಕಲಬುರ್ಗಿ ಬಸ್ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಸ್ಥಳಕ್ಕೆ ಸರ್ಕಲ್ ಪೊಲೀಸ್ ಇನ್ಸ್ಪೆಕ್ಟರ್ ರಮೇಶ ರೊಟ್ಟಿ, ಪಿಎಸ್ಐ ಗಜಾನಂದ ಬಿರಾದಾರ ಭೇಟಿ ನೀಡಿ ಪರಿಶೀಲಿಸಿದರು.