<p><strong>ಕಲಬುರ್ಗಿ: </strong>ಶಹಾಬಾದ್ ತಾಲ್ಲೂಕಿನ ಮರತೂರ ರೈಲ್ವೆ ನಿಲ್ದಾಣದ ಸಮೀಪ ಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹದ ಗುರುತು ಪತ್ತೆಯಾಗಿದ್ದು, ಸ್ನೇಹಿತನೇ ತನ್ನ ಸಹಚರದೊಂದಿಗೆ ಸೇರಿಕೊಂಡು ಅಪಹರಿಸಿ ಕೊಲೆ ಮಾಡಿ ಶವ ಎಸೆದು ಹೋಗಿರುವುದಾಗಿ ತನಿಖೆಯಲ್ಲಿ ಬಯಲಾಗಿದೆ.</p>.<p>ಜೇವರ್ಗಿ ತಾಲೂಕಿನ ಬಿಲ್ಲಾೈ ಗ್ರಾಮದ ಚನ್ನಬಸಪ್ಪ ನಾಯ್ಕೋಡಿ (35) ಎಂಬಾತ ಕೊಲೆಯಾದ ವ್ಯಕ್ತಿ. ಕಳೆದ ಶನಿವಾರ ನಾಪತ್ತೆಯಾಗಿದ್ದ ಚನ್ನಬಸಪ್ಪ, ಅಂದು ರಾತ್ರಿಯೇ ರೈಲ್ವೆ ನಿಲ್ದಾಣ ಸಮೀಪದ ಹಳಿ ಮೇಲೆ ಶವವಾಗಿ ಪತ್ತೆಯಾಗಿದ್ದ. ಈ ಕುರಿತು ವಾಡಿ ರೈಲ್ವೆ ನಿಲ್ದಾಣದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇತ್ತ, ಕುಟುಂಬದವರು ನೆಲೋಗಿ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದರು.</p>.<p>ಇದೀಗ ಹಣಕಾಸಿನ ವಿಷಯ ಸಂಬಂಧ ಅದೇ ನೇದಲಗಿ ಗ್ರಾಮದ ಪರಿಚಯಸ್ಥರೇ ಅಪಹರಣ ಮಾಡಿ, ಕೊಲೆಗೈದು ರೈಲ್ವೆ ಹಳಿ ಮೇಲೆ ಎಸೆದು ಹೋಗಿದ್ದರು ಎಂದು ಬೆಳಕಿಗೆ ಬಂದಿದೆ. ಸ್ನೇಹಿತನಾದ ಲಕ್ಷ್ಮಣ ಎಂಬಾತನಿಗೆ ಚನ್ನಬಸಪ್ಪ ₹ 2 ಲಕ್ಷ ನಗದು ಹಾಗೂ 10 ಗ್ರಾಂ ಬಂಗಾರ ಕೊಟ್ಟಿದ್ದ. ಇದನ್ನು ಮರಳಿ ಕೇಳಿದ ಕಾರಣಕ್ಕೆ ಲಕ್ಷ್ಮಣ ಹಾಗೂ ಇತರ ಇಬ್ಬರು ಸೇರಿಕೊಂಡು ಈ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಬೆಂಗಳೂರಿನಲ್ಲಿ ನೆಲೆಸಿದ್ದ ಆರೋಪಿ ಲಕ್ಷ್ಮಣ ಶುಕ್ರವಾರವಷ್ಟೇ ಗ್ರಾಮಕ್ಕೆ ಬಂದಿದ್ದ. ಮರುದಿನವೇ ಹಣ ನೀಡಿದ ಸ್ನೇಹಿತ ಚನ್ನಬಸಪ್ಪನನ್ನು ಹತ್ಯೆ ಮಾಡಿದ್ದಾನೆ ಎಂದು ಅವರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ಶಹಾಬಾದ್ ತಾಲ್ಲೂಕಿನ ಮರತೂರ ರೈಲ್ವೆ ನಿಲ್ದಾಣದ ಸಮೀಪ ಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹದ ಗುರುತು ಪತ್ತೆಯಾಗಿದ್ದು, ಸ್ನೇಹಿತನೇ ತನ್ನ ಸಹಚರದೊಂದಿಗೆ ಸೇರಿಕೊಂಡು ಅಪಹರಿಸಿ ಕೊಲೆ ಮಾಡಿ ಶವ ಎಸೆದು ಹೋಗಿರುವುದಾಗಿ ತನಿಖೆಯಲ್ಲಿ ಬಯಲಾಗಿದೆ.</p>.<p>ಜೇವರ್ಗಿ ತಾಲೂಕಿನ ಬಿಲ್ಲಾೈ ಗ್ರಾಮದ ಚನ್ನಬಸಪ್ಪ ನಾಯ್ಕೋಡಿ (35) ಎಂಬಾತ ಕೊಲೆಯಾದ ವ್ಯಕ್ತಿ. ಕಳೆದ ಶನಿವಾರ ನಾಪತ್ತೆಯಾಗಿದ್ದ ಚನ್ನಬಸಪ್ಪ, ಅಂದು ರಾತ್ರಿಯೇ ರೈಲ್ವೆ ನಿಲ್ದಾಣ ಸಮೀಪದ ಹಳಿ ಮೇಲೆ ಶವವಾಗಿ ಪತ್ತೆಯಾಗಿದ್ದ. ಈ ಕುರಿತು ವಾಡಿ ರೈಲ್ವೆ ನಿಲ್ದಾಣದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇತ್ತ, ಕುಟುಂಬದವರು ನೆಲೋಗಿ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದರು.</p>.<p>ಇದೀಗ ಹಣಕಾಸಿನ ವಿಷಯ ಸಂಬಂಧ ಅದೇ ನೇದಲಗಿ ಗ್ರಾಮದ ಪರಿಚಯಸ್ಥರೇ ಅಪಹರಣ ಮಾಡಿ, ಕೊಲೆಗೈದು ರೈಲ್ವೆ ಹಳಿ ಮೇಲೆ ಎಸೆದು ಹೋಗಿದ್ದರು ಎಂದು ಬೆಳಕಿಗೆ ಬಂದಿದೆ. ಸ್ನೇಹಿತನಾದ ಲಕ್ಷ್ಮಣ ಎಂಬಾತನಿಗೆ ಚನ್ನಬಸಪ್ಪ ₹ 2 ಲಕ್ಷ ನಗದು ಹಾಗೂ 10 ಗ್ರಾಂ ಬಂಗಾರ ಕೊಟ್ಟಿದ್ದ. ಇದನ್ನು ಮರಳಿ ಕೇಳಿದ ಕಾರಣಕ್ಕೆ ಲಕ್ಷ್ಮಣ ಹಾಗೂ ಇತರ ಇಬ್ಬರು ಸೇರಿಕೊಂಡು ಈ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಬೆಂಗಳೂರಿನಲ್ಲಿ ನೆಲೆಸಿದ್ದ ಆರೋಪಿ ಲಕ್ಷ್ಮಣ ಶುಕ್ರವಾರವಷ್ಟೇ ಗ್ರಾಮಕ್ಕೆ ಬಂದಿದ್ದ. ಮರುದಿನವೇ ಹಣ ನೀಡಿದ ಸ್ನೇಹಿತ ಚನ್ನಬಸಪ್ಪನನ್ನು ಹತ್ಯೆ ಮಾಡಿದ್ದಾನೆ ಎಂದು ಅವರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>