ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ್, ‘ಆರೋಪಿಗಳಾದ ಅನಿಲ್ ಮತ್ತು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಇಬ್ಬರೂ ಸ್ನೇಹಿತರು. ಇವರಿಬ್ಬರೂ ರಾಜಶೇಖರನ ಅಕ್ಕ ಮತ್ತು ತಂಗಿಯನ್ನು ಚುಡಾಯಿಸುತ್ತಿದ್ದರು. ಇದನ್ನು ಗಮನಿಸಿದ್ದ ರಾಜಶೇಖರ ಈ ಬಗ್ಗೆ ಮನೆಯಲ್ಲಿ ಹೇಳಿದ್ದ. ಇದರಿಂದ ಕುಪಿತಗೊಂಡ ಆರೋಪಿಗಳು ಬಾಲಕನ್ನು ಕೊಲೆ ಮಾಡಿದ್ದಾರೆ’ ಎಂದರು.