ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈಯಕ್ತಿಕ ದ್ವೇಷ: ಯುವಕನ ಕೊಲೆ

Last Updated 16 ಮೇ 2021, 2:29 IST
ಅಕ್ಷರ ಗಾತ್ರ

ಕಾಳಗಿ: ತಾಲ್ಲೂಕಿನ ಮೋಘಾ ಗ್ರಾಮದಲ್ಲಿ ಗುರುವಾರ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಒಬ್ಬ ಯುವಕ ಹಾಗೂ ಬಾಲಕ ಸೇರಿಕೊಂಡು, ಇನ್ನೊಬ್ಬ ಯುವಕನನ್ನು ಕೊಲೆ ಮಾಡಿದ್ದಾರೆ.

‌ಮೋಘಾ ಗ್ರಾಮದ ಜಗನ್ನಾಥ ಭೀಮರಾಯ ಚಿಂತಕುಂಟಾ (22) ಕೊಲೆಗೀಡಾದ ಯುವಕ. ಇದೇ ಗ್ರಾಮದ ಮಾಣಿಕ ತುಕಾರಾಮ ಮಾಳಗಿ (25) ಹಾಗೂ 17 ವರ್ಷದ ಒಬ್ಬ ಬಾಲಕ ಆರೋಪಿಗಳು.

ಜೂಸ್‌ ಕುಡಿಯುವ ನೆ‍ಪ ಮಾಡಿಕೊಂಡು ಜಗನ್ನಾಥನನ್ನು ಗ್ರಾಮದ ಹೊರಗೆ ಕರೆದುಕೊಂಡು ಹೋದ ಆರೋಪಿಗಳು ಹಗ್ಗದಿಂದ ಬಿಗಿದು, ಎದೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಮಾಣಿಕನನ್ನು ಬಂಧಿಸಲಾಗಿದ್ದು, ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ಬಾಲಕರ ಬಾಲಮಂದಿರಕ್ಕೆ ಕಳುಹಿಸಲಾಗಿದೆ.

ರಟಕಲ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT