‘ಅಂಕಿಅಂಶಗಳ ಮೇಲೆ ಹಣ ಬಿಡುಗಡೆ’
‘ಕೇಂದ್ರ ಸರ್ಕಾರ ತನ್ನ ಪಾಲಿನ ಬರ ಪರಿಹಾರ ಹಣ ರಾಜ್ಯ ಸರ್ಕಾರ ನೀಡುವ ಅಂಕಿ ಅಂಶಗಳ ಮೇಲೆ ಬಿಡುಗಡೆ ಮಾಡುತ್ತದೆ. ಆದರೆ ಕಾಂಗ್ರೆಸ್ನವರು ರಾಜಕೀಯ ಮಾಡುತ್ತಿದ್ದಾರೆ’ ಎಂದು ಭಾರತಿ ಶೆಟ್ಟಿ ಆರೋಪಿಸಿದರು. ಬರ ಪರಿಹಾರ ನೀಡುವಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು. ‘ಕೇಂದ್ರದಲ್ಲಿ ಈ ಮೊದಲು ಕಾಂಗ್ರೆಸ್ ಸರ್ಕಾರವಿದ್ದಾಗ ಶೇ 100ರಷ್ಟು ಬರ ಪರಿಹಾರ ಕೇಳಿದರೆ ಶೇ 5ರಷ್ಟು ಹಣ ಕೊಡುತ್ತಿದ್ದರು. ಆದರೆ ಮೋದಿ ಸರ್ಕಾರದ ಅವಧಿಯಲ್ಲಿ ಶೇ 25ರಿಂದ 35ರಷ್ಟು ಹಣ ಬಿಡುಗಡೆ ಮಾಡುತ್ತಿದ್ದಾರೆ’ ಎಂದರು.