<p><strong>ಕಲಬುರ್ಗಿ</strong>: ಕಳೆದ ಮೂರು ದಿನಗಳಿಂದ ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದರೂ ಗ್ರಾಮೀಣ ಭಾಗದಲ್ಲಿ ಹೆಚ್ಚಾಗುತ್ತಿದೆ. ಆದ್ದರಿಂದ ಲಾಕ್ಡೌನ್ ಇನ್ನಷ್ಟು ದಿನ ವಿಸ್ತರಿಸಿದರೆ ಒಳ್ಳೆಯದು ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ತಿಳಿಸಿದರು.</p>.<p>ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿ ಅವರಿಗೆ ಕೂಡಾ ತಿಳಿಸಿದ್ದೇವೆ. ಕೊರೊನಾ ಹೆಚ್ಚಾದರೆ ಇನ್ನೂ ಕಠಿಣ ಲಾಕ್ಡೌನ್ ಮಾಡಬಹುದು.</p>.<p>ಇನ್ನು ಹತ್ತು ದಿನ ಲಾಕ್ಡೌನ್ ವಿಸ್ತರಿಸಿದರೆ ಉತ್ತಮ ಅನ್ನುವುದು ನನ್ನ ಅಭಿಪ್ರಾಯ ಎಂದರು.</p>.<p>ರಾಜ್ಯದಲ್ಲಿ ಆಮ್ಲಜನಕ ಕೊರತೆ ನಿವಾರಿಸಲು ಗಣಿ ಇಲಾಖೆಯಿಂದ ಹತ್ತು ಟ್ಯಾಂಕರ್ ನೀಡುತ್ತಿದ್ದೇವೆ. ಹತ್ತು ದಿನದಲ್ಲಿ ಪ್ರತಿ ವಿಭಾಗಕ್ಕೆ ಎರಡೆರಡು ಆಮ್ಲಜನಕ ಟ್ಯಾಂಕರ್ ನೀಡಲಾಗುತ್ತದೆ. ಮೂರನೇ ಅಲೆಗಾಗಿ ಬೇಕಾದ ಎಲ್ಲಾ ಕ್ರಮಗಳನ್ನು ಈಗಾಗಲೇ ಕೈಗೊಳ್ಳುತ್ತೇವೆ ಎಂದರು.</p>.<p>ಸಂಸದ ಡಾ.ಉಮೇಶ ಜಾಧವ ಮಾತನಾಡಿ, ಕಪ್ಪು ಶಿಲೀಂಧ್ರ ಕಾಯಿಲೆ ಮಧುಮೇಹ ಇದ್ದವರಿಗೆ ಬರುತ್ತದೆ. ಅದಕ್ಕೂ ಮುಂಬೈನಿಂದ ಔಷಧಿ ತರಿಸಿಕೊಡಲಾಗಿದೆ. ಯಾರೂ ಗಾಬರಿಯಾಗುವ ಅಗತ್ಯವಿಲ್ಲ ಎಂದು ಹೇಳಿದರು.</p>.<p><a href="https://www.prajavani.net/district/chamarajanagara/public-gather-to-buy-groceries-in-chamarajanagar-after-lockdown-curfew-relaxation-831134.html" itemprop="url">ದಿನಸಿ ಖರೀದಿಗೆ ನಾಲ್ಕು ದಿನದ ಬಳಿಕ ಅವಕಾಶ: ಚಾಮರಾಜನಗರದಲ್ಲಿ ಜನದಟ್ಟಣೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ</strong>: ಕಳೆದ ಮೂರು ದಿನಗಳಿಂದ ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದರೂ ಗ್ರಾಮೀಣ ಭಾಗದಲ್ಲಿ ಹೆಚ್ಚಾಗುತ್ತಿದೆ. ಆದ್ದರಿಂದ ಲಾಕ್ಡೌನ್ ಇನ್ನಷ್ಟು ದಿನ ವಿಸ್ತರಿಸಿದರೆ ಒಳ್ಳೆಯದು ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ತಿಳಿಸಿದರು.</p>.<p>ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿ ಅವರಿಗೆ ಕೂಡಾ ತಿಳಿಸಿದ್ದೇವೆ. ಕೊರೊನಾ ಹೆಚ್ಚಾದರೆ ಇನ್ನೂ ಕಠಿಣ ಲಾಕ್ಡೌನ್ ಮಾಡಬಹುದು.</p>.<p>ಇನ್ನು ಹತ್ತು ದಿನ ಲಾಕ್ಡೌನ್ ವಿಸ್ತರಿಸಿದರೆ ಉತ್ತಮ ಅನ್ನುವುದು ನನ್ನ ಅಭಿಪ್ರಾಯ ಎಂದರು.</p>.<p>ರಾಜ್ಯದಲ್ಲಿ ಆಮ್ಲಜನಕ ಕೊರತೆ ನಿವಾರಿಸಲು ಗಣಿ ಇಲಾಖೆಯಿಂದ ಹತ್ತು ಟ್ಯಾಂಕರ್ ನೀಡುತ್ತಿದ್ದೇವೆ. ಹತ್ತು ದಿನದಲ್ಲಿ ಪ್ರತಿ ವಿಭಾಗಕ್ಕೆ ಎರಡೆರಡು ಆಮ್ಲಜನಕ ಟ್ಯಾಂಕರ್ ನೀಡಲಾಗುತ್ತದೆ. ಮೂರನೇ ಅಲೆಗಾಗಿ ಬೇಕಾದ ಎಲ್ಲಾ ಕ್ರಮಗಳನ್ನು ಈಗಾಗಲೇ ಕೈಗೊಳ್ಳುತ್ತೇವೆ ಎಂದರು.</p>.<p>ಸಂಸದ ಡಾ.ಉಮೇಶ ಜಾಧವ ಮಾತನಾಡಿ, ಕಪ್ಪು ಶಿಲೀಂಧ್ರ ಕಾಯಿಲೆ ಮಧುಮೇಹ ಇದ್ದವರಿಗೆ ಬರುತ್ತದೆ. ಅದಕ್ಕೂ ಮುಂಬೈನಿಂದ ಔಷಧಿ ತರಿಸಿಕೊಡಲಾಗಿದೆ. ಯಾರೂ ಗಾಬರಿಯಾಗುವ ಅಗತ್ಯವಿಲ್ಲ ಎಂದು ಹೇಳಿದರು.</p>.<p><a href="https://www.prajavani.net/district/chamarajanagara/public-gather-to-buy-groceries-in-chamarajanagar-after-lockdown-curfew-relaxation-831134.html" itemprop="url">ದಿನಸಿ ಖರೀದಿಗೆ ನಾಲ್ಕು ದಿನದ ಬಳಿಕ ಅವಕಾಶ: ಚಾಮರಾಜನಗರದಲ್ಲಿ ಜನದಟ್ಟಣೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>