ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಂಗೀತದಿಂದ ಮಾನಸಿಕ ನೆಮ್ಮದಿ’

Last Updated 4 ಜನವರಿ 2021, 11:40 IST
ಅಕ್ಷರ ಗಾತ್ರ

ಸಿರವಾರ: ‘ಭಕ್ತಿಗೀತೆ ಹಾಗೂ ಸಂಗೀತ ಆಲಿಸುವುದರಿಂದ ಮಾನಸಿಕ ಒತ್ತಡಗಳು ನಿವಾರಣೆಯಾಗಿ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಪ್ರತಿಯೊಬ್ಬರೂ ಸಂಗೀತ ಕೇಳುವುದನ್ನು ರೂಢಿಸಿಕೊಳ್ಳಬೇಕು’ ಚನ್ನಯ್ಯಸ್ವಾಮಿ ಹಿರೇಮಠ ಸಲಹೆ ನೀಡಿದರು.

ತಾಲ್ಲೂಕಿನ ಶಾಖಾಪೂರು ಗ್ರಾಮದ ದಂಡಗುಂಡ ಬಸವೇಶ್ವರ ದೇವಸ್ಥಾನ ಆವರಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬಂಜಾರ ಸಂಸ್ಕೃತಿ ಕಲಾ ಮಂಡಳಿ ಮತ್ತು ನೆಹರೂ ಯುವ ಕೇಂದ್ರದ ಸಹಯೋಗದಲ್ಲಿ ಭಾನುವಾರ ನಡೆದ ಸಂಸ್ಕೃತಿ-ಸಂಭ್ರಮ ಸಂಗೀತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸುಗಮ ಸಂಗೀತ ಗಾಯಕ ಅಂಬರೇಶ ಸಾಲಿಮಠ, ಮಹಾಂತೇಶ, ವೆಂಕಟೇಶ, ಕೇಶವ ಕಮ್ಮಾರ, ಮರಿಯಪ್ಪ ತಿಪ್ಪಲದಿನ್ನಿ ಅವರು ಸುಗಮ ಸಂಗೀತ, ಜಾನಪದ, ತತ್ವಪದ, ಭಜನಾಪದ, ಸಂಪ್ರದಾಯಿಕ ಹಾಡು, ಜೋಗುಳ ಪದ, ಭಾವಗೀತೆ ಸೇರಿದಂತೆ ವಿವಿಧ ಹಾಡುಗಳನ್ನು ಹಾಡುವ ಮೂಲಕ ಕಾರ್ಯಕ್ರಮ‌ ನಡೆಸಿಕೊಟ್ಟರು.

ನೆಹರೂ ಯುವ ಕೇಂದ್ರದ ವತಿಯಿಂದ ಸಾರ್ವಜನಿಕರಿಗೆ ಉಚಿತ ಮಾಸ್ಕ್, ಸ್ಯಾನಿಟೈಸರ್, ಜ್ಯೂಸ್ ವಿತರಿಸಿದರು. ಗ್ರಾಮ ಪಂಚಾಯಿತಿ ಸದಸ್ಯ ಶಂಕರಗೌಡ, ಮೌನೇಶ ನಾಯಕ, ಸಿರವಾರ ಬಸವೇಶ್ವರ ಕಾಲೇಜು ಪ್ರಾಚಾರ್ಯ ಧರ್ಮಣ್ಣ, ಉಪನ್ಯಾಸಕ ಹನುಮಂತ ಅತ್ತನೂರು, ನೆಹರೂ ಯುವ ಕೇಂದ್ರದ ಸಂಯೋಜಕ ಮುತ್ತಣ್ಣ ಅತ್ತನೂರು, ಸುರೇಶ್ ಪಾಟೀಲ, ಮುತ್ತನಗೌಡ, ಮಹಿಳೆಯರು, ಮಕ್ಕಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT