<p><strong>ಕಲಬುರ್ಗಿ</strong>: ಆಳಂದ ತಾಲ್ಲೂಕಿನ ಖಜೂರಿ ಗ್ರಾಮದ ಕೋರಣೇಶ್ವರ ವಿರಕ್ತಮಠಕ್ಕೆ ನೀಲಲೋಚನಾ ತಾಯಿ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸಿದ್ದ ಪೀಠಾಧಿಪತಿ ಮುರುಘೇಂದ್ರ ಕೋರಣೇಶ್ವರ ಸ್ವಾಮೀಜಿ ಅವರು, ಈಗ ಈ ನೇಮಕ ರದ್ದುಗೊಳಿಸಿದ್ದಾಗಿ ತಿಳಿಸಿದ್ದಾರೆ.</p>.<p>‘ಖಜೂರಿ ಮಠವು ಚಿತ್ರದುರ್ಗದ ಮುರುಘಾಮಠದ ಶಾಖೆಯಾಗಿದ್ದು, ಉತ್ತರಾಧಿಕಾರಿ ನೇಮಕದ ಅಧಿಕಾರ ಮುರುಘಾಮಠಕ್ಕೆ ಮಾತ್ರ ಇರುತ್ತದೆ. ಉತ್ತರಾಧಿಕಾರಿ ನೇಮಕದ ನಮ್ಮ ಘೋಷಣೆ ಹಿಂದಕ್ಕೆ ಪಡೆದಿದ್ದೇವೆ. ಮುರುಘಾಮಠ ಹಾಗೂಮಠದ ಭಕ್ತರು ಉತ್ತರಾಧಿಕಾರಿಯ ಆಯ್ಕೆ ಮಾಡಿಕೊಳ್ಳಲಿದ್ದಾರೆ’ ಎಂದು ಖಜೂರಿ ಸ್ವಾಮೀಜಿ ತಿಳಿಸಿದ್ದಾರೆ.</p>.<p>‘ಉತ್ತರಾಧಿಕಾರಿಯನ್ನು ಘೋಷಣೆ ಮಾಡುವ ಅಧಿಕಾರ ಚಿತ್ರದುರ್ಗದ ಮುರುಘಾಶರಣರಿಗೆ ಮಾತ್ರ ಇದೆ. ಆ ನಿಯಮವನ್ನು ಮೀರಿ<br />ನೀಲಲೋಚನಾ ತಾಯಿಯವರನ್ನು ಘೋಷಣೆ ಮಾಡಲಾಗಿತ್ತು. ಮಠದ ಉತ್ತರಾಧಿಕಾರಿಗಳು ಹಿಂದಿನ ಸ್ವಾಮೀಜಿಗಳ<br />ಸಂಬಂಧಿಯಾಗಿರುವಂತಿಲ್ಲ. ಆದರೆ, ನೀಲಲೋಚನಾ ತಾಯಿ ಅವರು ಹಿಂದೆ ಮಠದ ಪೀಠಾಧಿಪತಿಯಾಗಿದ್ದ ಸ್ವಾಮೀಜಿ ಅವರ ಸಂಬಂಧಿಯಾಗಿದ್ದಾರೆ. ಹೀಗಾಗಿ, ಈ ನಿರ್ಧಾರದ ಬಗ್ಗೆ ಚಿತ್ರದುರ್ಗ ಮುರುಘಾಮಠದವರು ಅತೃಪ್ತಿ ವ್ಯಕ್ತಪಡಿಸಿದ್ದರು’ ಎಂದು ಮೂಲಗಳು ತಿಳಿಸಿವೆ.</p>.<p>ಜೊತೆಗೆ ಉತ್ತರಾಧಿಕಾರಿಯನ್ನಾಗಿ ನೇಮಕ ಮಾಡುವಾಗ ತಮ್ಮೊಂದಿಗೆ ಏಕೆ ಚರ್ಚೆ ನಡೆಸಿಲ್ಲ ಎಂದು ಖಜೂರಿ ಗ್ರಾಮಸ್ಥರು ಆಕ್ಷೇಪ<br />ವ್ಯಕ್ತಪಡಿಸಿದ್ದರು ಎಂದು ತಿಳಿದು ಬಂದಿದೆ. ಇದರಿಂದಾಗಿ<br />ಮುರುಘೇಂದ್ರ ಕೋರಣೇಶ್ವರ ಸ್ವಾಮೀಜಿ ತಮ್ಮ ನಿರ್ಧಾರವನ್ನು ಹಿಂದಕ್ಕೆ ಪಡೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ</strong>: ಆಳಂದ ತಾಲ್ಲೂಕಿನ ಖಜೂರಿ ಗ್ರಾಮದ ಕೋರಣೇಶ್ವರ ವಿರಕ್ತಮಠಕ್ಕೆ ನೀಲಲೋಚನಾ ತಾಯಿ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸಿದ್ದ ಪೀಠಾಧಿಪತಿ ಮುರುಘೇಂದ್ರ ಕೋರಣೇಶ್ವರ ಸ್ವಾಮೀಜಿ ಅವರು, ಈಗ ಈ ನೇಮಕ ರದ್ದುಗೊಳಿಸಿದ್ದಾಗಿ ತಿಳಿಸಿದ್ದಾರೆ.</p>.<p>‘ಖಜೂರಿ ಮಠವು ಚಿತ್ರದುರ್ಗದ ಮುರುಘಾಮಠದ ಶಾಖೆಯಾಗಿದ್ದು, ಉತ್ತರಾಧಿಕಾರಿ ನೇಮಕದ ಅಧಿಕಾರ ಮುರುಘಾಮಠಕ್ಕೆ ಮಾತ್ರ ಇರುತ್ತದೆ. ಉತ್ತರಾಧಿಕಾರಿ ನೇಮಕದ ನಮ್ಮ ಘೋಷಣೆ ಹಿಂದಕ್ಕೆ ಪಡೆದಿದ್ದೇವೆ. ಮುರುಘಾಮಠ ಹಾಗೂಮಠದ ಭಕ್ತರು ಉತ್ತರಾಧಿಕಾರಿಯ ಆಯ್ಕೆ ಮಾಡಿಕೊಳ್ಳಲಿದ್ದಾರೆ’ ಎಂದು ಖಜೂರಿ ಸ್ವಾಮೀಜಿ ತಿಳಿಸಿದ್ದಾರೆ.</p>.<p>‘ಉತ್ತರಾಧಿಕಾರಿಯನ್ನು ಘೋಷಣೆ ಮಾಡುವ ಅಧಿಕಾರ ಚಿತ್ರದುರ್ಗದ ಮುರುಘಾಶರಣರಿಗೆ ಮಾತ್ರ ಇದೆ. ಆ ನಿಯಮವನ್ನು ಮೀರಿ<br />ನೀಲಲೋಚನಾ ತಾಯಿಯವರನ್ನು ಘೋಷಣೆ ಮಾಡಲಾಗಿತ್ತು. ಮಠದ ಉತ್ತರಾಧಿಕಾರಿಗಳು ಹಿಂದಿನ ಸ್ವಾಮೀಜಿಗಳ<br />ಸಂಬಂಧಿಯಾಗಿರುವಂತಿಲ್ಲ. ಆದರೆ, ನೀಲಲೋಚನಾ ತಾಯಿ ಅವರು ಹಿಂದೆ ಮಠದ ಪೀಠಾಧಿಪತಿಯಾಗಿದ್ದ ಸ್ವಾಮೀಜಿ ಅವರ ಸಂಬಂಧಿಯಾಗಿದ್ದಾರೆ. ಹೀಗಾಗಿ, ಈ ನಿರ್ಧಾರದ ಬಗ್ಗೆ ಚಿತ್ರದುರ್ಗ ಮುರುಘಾಮಠದವರು ಅತೃಪ್ತಿ ವ್ಯಕ್ತಪಡಿಸಿದ್ದರು’ ಎಂದು ಮೂಲಗಳು ತಿಳಿಸಿವೆ.</p>.<p>ಜೊತೆಗೆ ಉತ್ತರಾಧಿಕಾರಿಯನ್ನಾಗಿ ನೇಮಕ ಮಾಡುವಾಗ ತಮ್ಮೊಂದಿಗೆ ಏಕೆ ಚರ್ಚೆ ನಡೆಸಿಲ್ಲ ಎಂದು ಖಜೂರಿ ಗ್ರಾಮಸ್ಥರು ಆಕ್ಷೇಪ<br />ವ್ಯಕ್ತಪಡಿಸಿದ್ದರು ಎಂದು ತಿಳಿದು ಬಂದಿದೆ. ಇದರಿಂದಾಗಿ<br />ಮುರುಘೇಂದ್ರ ಕೋರಣೇಶ್ವರ ಸ್ವಾಮೀಜಿ ತಮ್ಮ ನಿರ್ಧಾರವನ್ನು ಹಿಂದಕ್ಕೆ ಪಡೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>