ಸಮಾರಂಭದಲ್ಲಿ ರಾಜ್ಯದ ಚರಿತ್ರೆ ಮತ್ತು ಕೊಡುಗೆಗಳನ್ನು ಪಸರಿಸುವ ಕುರಿತು ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಅಭಿಯಾನವನ್ನು ಮಕ್ಕಳಿಂದ ಉದ್ಘಾಟಿಸಲಾಯಿತು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಬ್ದುಲ್ ನಬಿ, ಉದ್ಯೋಗ ಖಾತ್ರಿ ಸಹಾಯಕ ನಿರ್ದೇಶಕ ರಮೇಶ ಪಾಟೀಲ, ಪುರಸಭೆ ಮುಖ್ಯಾಧಿಕಾರಿ ಬಾಬು, ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ಎನ್.ಜಿ.ಹಿರೇಮಠ, ಮಲ್ಲು ಪಾಟೀಲ, ಪುರಸಭೆ ಸದಸ್ಯರಾದ ಯಮನಪ್ಪ ಭಾಸಗಿ ಇದ್ದರು.