‘ಪ್ರಿಯಾಂಕ್ ಅವರು ಸೋಲುವ ಹತಾಶೆಯಿಂದ ಮಾತನಾಡುವ ಬದಲು ತಮ್ಮ ತಂದೆಯಂತೆ ಮುತ್ಸದ್ದಿತನ ತೋರಬೇಕು. ಹಿಂದಿನ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಸೋಲಲು ಪ್ರಿಯಾಂಕ್ ಕಾರಣ. ಸ್ವಯಂಕೃತ ತಪ್ಪಿನಿಂದಲೇ ಪ್ರಿಯಾಂಕ್ ಸೋಲುವರು. ಅವರನ್ನು ಸೋಲಿಸುವುದೇ ನಮ್ಮ ಧ್ಯೇಯ’ ಎಂದರು. ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ ನಮೋಶಿ, ಬಿ.ಜಿ. ಪಾಟೀಲ, ಅಮರನಾಥ ಪಾಟೀಲ ಇದ್ದರು.