<p><strong>ಕಲಬುರಗಿ:</strong> ‘ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಕುರಿತು ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ದಾಸ್ ನೇತೃತ್ವದ ಏಕಸದಸ್ಯ ಆಯೋಗ ಸಲ್ಲಿಸಿರುವ ವರದಿಯಲ್ಲಿ ಅನೇಕ ತಪ್ಪುಗಳಿವೆ’ ಎಂದು ಬಂಜಾರ, ಭೋವಿ, ಕೊರಚ ಮತ್ತು ಕೊರಮ ಸಮಾಜಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಸಚಿನ್ ಚವಾಣ್ ದೂರಿದರು.</p>.<p>‘ಸಮಿತಿಯು ಈ ವರದಿಯನ್ನು ತರಾತುರಿಯಲ್ಲಿ ಸಿದ್ಧಪಡಿಸಿದೆ. ರಾಜ್ಯದಲ್ಲಿ 3,900ರಷ್ಟು ತಾಂಡಾಗಳಿದ್ದು, ಅಲ್ಲಿ ಸರಿಯಾದ ಸಮೀಕ್ಷೆಯೇ ನಡೆದಿಲ್ಲ’ ಎಂದು ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.</p>.<p>‘ವರದಿಯಲ್ಲಿನ ಲೋಪಗಳನ್ನು ಸರಿಪಡಿಸಲು ಅಂಕಿ–ಅಂಶಗಳನ್ನು ಮತ್ತೊಮ್ಮೆ ಪರಿಶೀಲಿಸಬೇಕು. ಶೇ 100ರಷ್ಟು ಸಮೀಕ್ಷೆ ನಡೆಸಬೇಕು. ಈ ವರದಿ ಜಾರಿಗೊಳಿಸುವುದಾದರೆ, ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಕ್ಕೆ ಶೇ 7ರಷ್ಟು ಮೀಸಲಾತಿ ನೀಡಬೇಕು. ವರದಿಯಲ್ಲಿ ಪ್ರಸ್ತಾಪಿಸಿರುವ ಸ್ಪರ್ಶ ಜಾತಿಗಳು ಎಂಬ ಪ್ರಸ್ತಾಪವಿದ್ದು, ಅದೊಂದು ಅಸಾಂವಿಧಾನಿಕ ಪದವಾಗಿದೆ. ಅದನ್ನು ಕೂಡಲೇ ವರದಿಯಿಂದ ತೆಗೆದು ಹಾಕಬೇಕು’ ಎಂದು ಆಗ್ರಹಿಸಿದರು.</p>.<p>‘ಶೇ 100ರಷ್ಟು ಸಮೀಕ್ಷೆಯೇ ಮಾಡದೆ ಎಡಗೈ ಸಮುದಾಯಗಳಿಗೆ ಶೇ 6.5 ಹಾಗೂ ಬಲಗೈ ಸಮುದಾಯಗಳಿಗೆ ಶೇ 5.5ರಷ್ಟು ಮೀಸಲು ನೀಡುವ ಸಿದ್ಧತೆ ನಡೆದಿದೆ. ಬಂಜಾರ, ಭೋವಿ ಸಮುದಾಯಗಳಿಗೆ ಶೇ 4 ಹಾಗೂ ಇತರರಿಗೆ ಶೇ 1ರಷ್ಟು ಒಳಮೀಸಲಾಗಿ ವರ್ಗೀಕರಿಸಿ ಜಾರಿಗೊಳಿಸಿದರೆ, ‘ಕಾಂಗ್ರೆಸ್ ಹಟಾವೋ’ ಘೋಷಣೆಯೊಂದಿಗೆ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪಾಠ ಕಲಿಸಲಾಗುವುದು’ ಎಂದು ಎಚ್ಚರಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಸಂಘದ ರಾಜ್ಯಾಧ್ಯಕ್ಷ ಶಾಮರಾವ ಪವಾರ, ವಿನೋದ ಚವಾಣ, ಖೇಮಸಿಂಗ್ ರಾಠೋಡ, ಚಂದು ಜಾಧವ ಸೇರಿದಂತೆ ಹಲವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ‘ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಕುರಿತು ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ದಾಸ್ ನೇತೃತ್ವದ ಏಕಸದಸ್ಯ ಆಯೋಗ ಸಲ್ಲಿಸಿರುವ ವರದಿಯಲ್ಲಿ ಅನೇಕ ತಪ್ಪುಗಳಿವೆ’ ಎಂದು ಬಂಜಾರ, ಭೋವಿ, ಕೊರಚ ಮತ್ತು ಕೊರಮ ಸಮಾಜಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಸಚಿನ್ ಚವಾಣ್ ದೂರಿದರು.</p>.<p>‘ಸಮಿತಿಯು ಈ ವರದಿಯನ್ನು ತರಾತುರಿಯಲ್ಲಿ ಸಿದ್ಧಪಡಿಸಿದೆ. ರಾಜ್ಯದಲ್ಲಿ 3,900ರಷ್ಟು ತಾಂಡಾಗಳಿದ್ದು, ಅಲ್ಲಿ ಸರಿಯಾದ ಸಮೀಕ್ಷೆಯೇ ನಡೆದಿಲ್ಲ’ ಎಂದು ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.</p>.<p>‘ವರದಿಯಲ್ಲಿನ ಲೋಪಗಳನ್ನು ಸರಿಪಡಿಸಲು ಅಂಕಿ–ಅಂಶಗಳನ್ನು ಮತ್ತೊಮ್ಮೆ ಪರಿಶೀಲಿಸಬೇಕು. ಶೇ 100ರಷ್ಟು ಸಮೀಕ್ಷೆ ನಡೆಸಬೇಕು. ಈ ವರದಿ ಜಾರಿಗೊಳಿಸುವುದಾದರೆ, ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಕ್ಕೆ ಶೇ 7ರಷ್ಟು ಮೀಸಲಾತಿ ನೀಡಬೇಕು. ವರದಿಯಲ್ಲಿ ಪ್ರಸ್ತಾಪಿಸಿರುವ ಸ್ಪರ್ಶ ಜಾತಿಗಳು ಎಂಬ ಪ್ರಸ್ತಾಪವಿದ್ದು, ಅದೊಂದು ಅಸಾಂವಿಧಾನಿಕ ಪದವಾಗಿದೆ. ಅದನ್ನು ಕೂಡಲೇ ವರದಿಯಿಂದ ತೆಗೆದು ಹಾಕಬೇಕು’ ಎಂದು ಆಗ್ರಹಿಸಿದರು.</p>.<p>‘ಶೇ 100ರಷ್ಟು ಸಮೀಕ್ಷೆಯೇ ಮಾಡದೆ ಎಡಗೈ ಸಮುದಾಯಗಳಿಗೆ ಶೇ 6.5 ಹಾಗೂ ಬಲಗೈ ಸಮುದಾಯಗಳಿಗೆ ಶೇ 5.5ರಷ್ಟು ಮೀಸಲು ನೀಡುವ ಸಿದ್ಧತೆ ನಡೆದಿದೆ. ಬಂಜಾರ, ಭೋವಿ ಸಮುದಾಯಗಳಿಗೆ ಶೇ 4 ಹಾಗೂ ಇತರರಿಗೆ ಶೇ 1ರಷ್ಟು ಒಳಮೀಸಲಾಗಿ ವರ್ಗೀಕರಿಸಿ ಜಾರಿಗೊಳಿಸಿದರೆ, ‘ಕಾಂಗ್ರೆಸ್ ಹಟಾವೋ’ ಘೋಷಣೆಯೊಂದಿಗೆ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪಾಠ ಕಲಿಸಲಾಗುವುದು’ ಎಂದು ಎಚ್ಚರಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಸಂಘದ ರಾಜ್ಯಾಧ್ಯಕ್ಷ ಶಾಮರಾವ ಪವಾರ, ವಿನೋದ ಚವಾಣ, ಖೇಮಸಿಂಗ್ ರಾಠೋಡ, ಚಂದು ಜಾಧವ ಸೇರಿದಂತೆ ಹಲವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>