‘ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸೇಡಂ ಪೊಲೀಸರು ಕೊಲೆಯತ್ನ ಪ್ರಕರಣ ದಾಖಲಿಸದೆ
ಕರ್ತವ್ಯ ನಿರ್ಲಕ್ಷ್ಯ ತೋರಿದ್ದಾರೆ. ಅಲ್ಲದೆ, ಘಟನಾ ಸ್ಥಳದಲ್ಲಿ ಇರದ ಅವರ ಪುತ್ರ ಶರಣು ಮೇಲೆ ಪ್ರತಿ ದೂರು ದಾಖಲಿಸಿಕೊಂಡು ಆರೋಪಿಗಳ ರಕ್ಷಣೆಗೆ ಮುಂದಾಗಿದ್ದಾರೆ. ಮಾರಣಾಂತಿಕ ಹಲ್ಲೆ ನಡೆದರೂ ಕೊಲೆ ಯತ್ನ ಸೆಕ್ಷನ್ 307 ಪ್ರಕರಣ ದಾಖಲಿಸಿಲ್ಲ. ಸಿದ್ದರಾಮಪ್ಪ ನೀಲಂಗಿ ಕುರಿತು ಏಪ್ರಿಲ್ 17ರಂದೇ ದೂರು ನೀಡಿದರೂ ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದ ಹಿನ್ನೆಲೆಯಲ್ಲಿ ಈಗ ಹಲ್ಲೆಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗುವಂತಾಗಿದೆ’ ಎಂದು ದೂರಿದರು.