ಜಲಾಶಯದಿಂದ ನದಿಗೆ ನೀರು ಬಿಡುತ್ತಿರುವುದರಿಂದ ಮುಲ್ಲಾಮಾರಿ ನದಿಯಲ್ಲಿ ಪ್ರವಾಹ ಉಂಟಾಗಲಿದೆ. ಕಳೆದ ಮೂರು ದಿನಗಳಿಂದ 130 ಕ್ಯುಸೆಕ್ ಹಾಗೂ 60 ಕ್ಯುಸೆಕ್ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗಿದೆ. ಸೋಮವಾರ ಬೀದರ್ ಜಿಲ್ಲೆಯ ಬಸವ ಕಲ್ಯಾಣ ಮತ್ತು ಹುಮನಾಬಾದ ತಾಲ್ಲೂಕುಗಳಲ್ಲಿ ಭಾರಿ ಮಳೆ ಸುರಿದ ಕಾರಣ ಮುಂಜಾಗ್ರತಾ ಕ್ರಮವಾಗಿ ಜಲಾಶಯದಿಂದ ನದಿಗೆ ಬಿಡಲಾಗುತ್ತಿದೆ ಎಂದು ಯೋಜನೆಯ ಎಇಇ ಹಣಮಂತ ಪೂಜಾರಿ ತಿಳಿಸಿದ್ದಾರೆ.