‘ನಾಗತಿಹಳ್ಳಿಯ ಅಭಿವ್ಯಕ್ತಿ ಸಾಂಸ್ಕೃತಿಕ ವೇದಿಕೆ ಹಾಗೂ ಟೆಂಟ್ ಸಿನಿಮಾ ಶಾಲೆ ವತಿಯಿಂದ ಶಿಕ್ಷಕರು, ಕಲಾವಿದರು, ವಿದ್ಯಾರ್ಥಿಗಳು, ಸ್ನೇಹಿತರನ್ನು ಒಳಗೊಂಡು ಸಣ್ಣ ನೆರವು ನೀಡಲು ಬಂದಿದ್ದೇವೆ. ಸಂತ್ರಸ್ತರಿಗೆ ಅಕ್ಕಿ, ಬೇಳೆ, ಸಕ್ಕರೆ, ಉಪ್ಪು, ಅಡುಗೆ ಎಣ್ಣೆ, ದೀಪ, ಮಕ್ಕಳಿಗೆ ಓದುವ– ಬರೆಯುವ ಸಲಕರಣೆಗಳು, ಸಿಹಿ ಹಂಚಿ ದೀಪಾವಳಿ ಆಚರಿಸಲಾಗುವುದು’ ಎಂದರು.
‘ಈ ವೇದಿಕೆಯಿಂದ ಕಳೆದ 35 ವರ್ಷಗಳಿಂದ ಸಾಹಿತ್ಯ, ಸಾಂಸ್ಕೃತಿಕ, ಆರೋಗ್ಯ ಹಾಗೂ ಪರಿಸರ ಕಾಳಜಿ ಕಾರ್ಯಕ್ರಮಗಳನ್ನು ಮಾಡಿಕೊಂಡು ಬಂದಿದ್ದೇವೆ. ಪ್ರತಿ ವರ್ಷ ‘ನಾಗತಿಹಳ್ಳಿ ಸಾಂಸ್ಕೃತಿಕ ಹಬ್ಬ’ ಆಚರಿಸುವ ಮೂಲಕ ಹಳ್ಳಿ ಸಂಸ್ಕೃತಿಗೆ ಪೋಷಿಸುವ ಪ್ರಯತ್ನ ಮಾಡುತ್ತಿದ್ದೇವೆ’ ಎಂದೂ ಹೇಳಿದರು.