ಕಲ್ಯಾಣ ಕರ್ನಾಟಕ ಭಾಗದಿಂದ ಅಪಾರ ಸಂಖ್ಯೆಯ ಜನರು ಕರಾವಳಿ ಜಿಲ್ಲೆಗಳಿಗೆ ಶಿಕ್ಷಣ, ಉದ್ಯಮ, ಪ್ರವಾಸೋದ್ಯಮ ಹಾಗೂ ಧಾರ್ಮಿಕ ಕಾರ್ಯಗಳಿಗೆ ಭೇಟಿ ನೀಡುತ್ತಾರೆ. ಈ ಮಾರ್ಗವು ಬಲು ದೂರವಾದ್ದರಿಂದ ಬಸ್ ಸಂಚಾರ ಸಂಕಷ್ಟವಾಗಿದೆ. ಅಲ್ಲದೇ,ಮಳೆಗಾಲದಲ್ಲಿ ಭೂಕುಸಿತ ಮತ್ತು ರಸ್ತೆಗಳ ದುಸ್ಥಿತಿಯೂ ಪ್ರವಾಸಕ್ಕೆ ಅಡ್ಡಿಯಾಗುತ್ತಿದೆ. ಸುಗಮ ಸಂಚಾರಕ್ಕಾಗಿ ಕಲಬುರ್ಗಿಯಿಂದ ಬೆಂಗಳೂರು ಅಲ್ಲಿಂದ ಮಂಗಳೂರಿಗೆ ವಿಮಾನ ಸಂಚಾರ ಆರಂಭಿಸಬೇಕು ಎಂದೂ ಮಂಗಳೂರು ಸಂಸದರೂ ಆದ ಕಟೀಲ್ ಅವರು ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.