<p><strong>ಕಲಬುರಗಿ:</strong> ಜಮೀನಿನ ಮ್ಯುಟೇಶನ್ ಮಾಡಿಕೊಡಲು ರೈತರೊಬ್ಬರಿಂದ ₹ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಹಣ ಪಡೆಯುವ ಸಂದರ್ಭದಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಅಫಜಲಪುರ ತಾಲ್ಲೂಕಿನ ನಂದರಗಿ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ (ವಿ.ಎ) ಸಿದ್ದರಾಮ ಪಡಶೆಟ್ಟಿ ಎಂಬುವವರನ್ನು ಸೋಮವಾರ ಬಂಧಿಸಿದ್ದಾರೆ.</p>.ಉತ್ತರಪ್ರದೇಶ: 5 ಕೆ.ಜಿ ಆಲೂಗಡ್ಡೆ ಲಂಚ ಕೇಳಿದ ಪೊಲೀಸ್ ಅಮಾನತು!.<p>ಅಫಜಲಪುರ ತಾಲ್ಲೂಕಿನ ದುದ್ದಣಗಿ ಗ್ರಾಮದ ಸೈಫನ್ ಸಾಬ್ ಅಜೀಜ್ ನಾಕೇದಾರ ಎಂಬುವವರು ಮ್ಯುಟೇಶನ್ ಮಾಡಿಸಲು ಅರ್ಜಿ ಸಲ್ಲಿಸಿದ್ದರು. ಈ ಕೆಲಸ ಮಾಡಲು ಸಿದ್ದರಾಮ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ಬೇಸತ್ತ ಸೈಫನ್ ಸಾಬ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. </p><p>ಅಫಜಲಪುರ ತಹಶೀಲ್ದಾರ್ ಕಚೇರಿಯಲ್ಲಿ ಲಂಚ ಪಡೆಯುವ ವೇಳೆ ಲೋಕಾಯುಕ್ತ ಎಸ್ಪಿ ಜಾನ್ ಆಂಟೋನಿ ಮಾರ್ಗದರ್ಶನದಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಡಿವೈಎಸ್ಪಿ ಮಂಜುನಾಥ ಗಂಗಲ್ ಹಾಗೂ ಪೊಲೀಸ್ ಇನ್ಸ್ಪೆಕ್ಟರ್ ಧ್ರುವತಾರಾ ಅವರು ಆರೋಪಿಯನ್ನು ಬಂಧಿಸಿದರು. </p>.ದೆಹಲಿ: ₹20 ಲಕ್ಷ ಲಂಚ ಪಡೆಯುತ್ತಿದ್ದ ಇ.ಡಿ ಅಧಿಕಾರಿಯನ್ನು ಬಂಧಿಸಿದ ಸಿಬಿಐ. <p>ಲೋಕಾಯುಕ್ತ ಪೊಲೀಸ್ ಸಿಬ್ಬಂದಿ ಹಣಮಂತ, ಮಸೂದ್, ಶರಣು ಈ ಸಂದರ್ಭದಲ್ಲಿದ್ದರು.</p> .₹2 ಕೋಟಿ ಲಂಚ: ಬಿಎಂಸಿ ಅಧಿಕಾರಿ ಎಸಿಬಿ ಬಲೆಗೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಜಮೀನಿನ ಮ್ಯುಟೇಶನ್ ಮಾಡಿಕೊಡಲು ರೈತರೊಬ್ಬರಿಂದ ₹ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಹಣ ಪಡೆಯುವ ಸಂದರ್ಭದಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಅಫಜಲಪುರ ತಾಲ್ಲೂಕಿನ ನಂದರಗಿ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ (ವಿ.ಎ) ಸಿದ್ದರಾಮ ಪಡಶೆಟ್ಟಿ ಎಂಬುವವರನ್ನು ಸೋಮವಾರ ಬಂಧಿಸಿದ್ದಾರೆ.</p>.ಉತ್ತರಪ್ರದೇಶ: 5 ಕೆ.ಜಿ ಆಲೂಗಡ್ಡೆ ಲಂಚ ಕೇಳಿದ ಪೊಲೀಸ್ ಅಮಾನತು!.<p>ಅಫಜಲಪುರ ತಾಲ್ಲೂಕಿನ ದುದ್ದಣಗಿ ಗ್ರಾಮದ ಸೈಫನ್ ಸಾಬ್ ಅಜೀಜ್ ನಾಕೇದಾರ ಎಂಬುವವರು ಮ್ಯುಟೇಶನ್ ಮಾಡಿಸಲು ಅರ್ಜಿ ಸಲ್ಲಿಸಿದ್ದರು. ಈ ಕೆಲಸ ಮಾಡಲು ಸಿದ್ದರಾಮ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ಬೇಸತ್ತ ಸೈಫನ್ ಸಾಬ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. </p><p>ಅಫಜಲಪುರ ತಹಶೀಲ್ದಾರ್ ಕಚೇರಿಯಲ್ಲಿ ಲಂಚ ಪಡೆಯುವ ವೇಳೆ ಲೋಕಾಯುಕ್ತ ಎಸ್ಪಿ ಜಾನ್ ಆಂಟೋನಿ ಮಾರ್ಗದರ್ಶನದಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಡಿವೈಎಸ್ಪಿ ಮಂಜುನಾಥ ಗಂಗಲ್ ಹಾಗೂ ಪೊಲೀಸ್ ಇನ್ಸ್ಪೆಕ್ಟರ್ ಧ್ರುವತಾರಾ ಅವರು ಆರೋಪಿಯನ್ನು ಬಂಧಿಸಿದರು. </p>.ದೆಹಲಿ: ₹20 ಲಕ್ಷ ಲಂಚ ಪಡೆಯುತ್ತಿದ್ದ ಇ.ಡಿ ಅಧಿಕಾರಿಯನ್ನು ಬಂಧಿಸಿದ ಸಿಬಿಐ. <p>ಲೋಕಾಯುಕ್ತ ಪೊಲೀಸ್ ಸಿಬ್ಬಂದಿ ಹಣಮಂತ, ಮಸೂದ್, ಶರಣು ಈ ಸಂದರ್ಭದಲ್ಲಿದ್ದರು.</p> .₹2 ಕೋಟಿ ಲಂಚ: ಬಿಎಂಸಿ ಅಧಿಕಾರಿ ಎಸಿಬಿ ಬಲೆಗೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>