ರಾಜ್ಯದಲ್ಲಿ ಸುಮಾರು 70 ಲಕ್ಷದಷ್ಟಿರುವ ಈ ಸಮುದಾಯದ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ಸರ್ಕಾರ ಒತ್ತು ನೀಡಬೇಕಾಗಿದೆ. ಇದಕ್ಕಾಗಿ ತಕ್ಷಣ ನಿಗಮಕ್ಕೆ ₹500 ಕೋಟಿ ಆರ್ಥಿಕ ನೆರವು ನೀಡಬೇಕು. ನಿಗಮದ ಅಧ್ಯಕ್ಷರ ನೇಮಕಾತಿ ವೇಳೆ ಉತ್ತರ ಕರ್ನಾಟಕಕ್ಕೆ ಅದರಲ್ಲೂ ಮುಖ್ಯವಾಗಿ ಕಲ್ಯಾಣ ಕರ್ನಾಟಕ ಭಾಗದವರನ್ನು ಪರಿಗಣಿಸಬೇಕು. ನಿರ್ದೇಶಕರ ಆಯ್ಕೆ ಸಂದರ್ಭದಲ್ಲಿ ಸಮುದಾಯದಲ್ಲಿರುವ ಶಿಕ್ಷಣ, ಆರ್ಥಿಕ ಹಾಗೂ ಸಾಮಾಜಿಕ ತಜ್ಞರನ್ನು ಪರಿಗಣಿಸಬೇಕು ಎಂದಿದ್ದಾರೆ.